ಇವು ಕಾಂತಾರ1 ಸಿನಿಮಾಗೆ ಅಂಟಿಕೊಂಡ ವಿವಾದ , ಸಮಸ್ಯೆಗಳಾಗಿದೆ. ಆದರೆ ಇಷ್ಟಕ್ಕೆ ಎಲ್ಲವೂ ಮುಗಿದಿಲ್ಲ. ಕಾಂತಾರ ಸಿನಿಮಾದಿಂದ ತುಳುನಾಡಿನ ಆರಾಧ್ಯ ದೈವಗಳನ್ನು ಅಣಕಿಸುವ ಕೆಲಸವಾಗುತ್ತಿದೆ. ವೇಷ ತೊಟ್ಟು ಅಣಕು ಮಾಡುತ್ತಿದ್ದಾರೆ. ವೇದಿಕೆಗಳಲ್ಲಿ, ರಿಯಾಲಿಟಿ ಶೋಗಳಲ್ಲಿ, ಕಾಲೇಜುಗಳಲ್ಲಿ ದೈವದ ನರ್ತನೆ ಮಾಡುತ್ತಿದ್ದಾರೆ. ಇದು ದೈವಾರಾಧನೆ, ನಂಬಿಕೆಗೆ ಧಕ್ಕೆ ತಂದಿದೆ ಅನ್ನೋ ಆರೋಪ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಕೇಳಿಬಂದಿತ್ತು. ಹೀಗಾಗಿ ಸಿನಿಮಾ ಬ್ಯಾನ್ ಮಾಡಬೇಕು ಎಂಬ ಆಗ್ರಹವೂ ವ್ಯಕ್ತವಾಗಿತ್ತು.