ಹೊಂಬಾಳೆ ಫಿಲ್ಮ್‌ ಯುವ ಚಿತ್ರಕ್ಕೆ ನನ್ನನ್ನು ಸಂಪರ್ಕಿಸಿಲ್ಲ: ರುಕ್ಮಿಣಿ ವಸಂತ್‌

Published : Feb 23, 2023, 11:38 AM IST

ಹೊಂಬಾಳೆ ಜೊತೆ ಕೈ ಜೋಡಿಸಿದ್ರಾ ರುಕ್ಮಿಣಿ ವಸಂತ್? ಹರಿದಾಡುತ್ತಿರುವ ಗಾಸಿಪ್‌ ಬಗ್ಗೆ ಕ್ಲಾರಿಟಿ ಕೊಟ್ಟ ನಟಿ.......

PREV
15
ಹೊಂಬಾಳೆ ಫಿಲ್ಮ್‌ ಯುವ ಚಿತ್ರಕ್ಕೆ ನನ್ನನ್ನು ಸಂಪರ್ಕಿಸಿಲ್ಲ: ರುಕ್ಮಿಣಿ ವಸಂತ್‌

‘ಹೊಂಬಾಳೆ ಫಿಲಂಸ್‌ ನಿರ್ಮಾಣದ ಮತ್ತೊಂದು ಚಿತ್ರದಲ್ಲಿ ನಟಿಸುವ ಬಗ್ಗೆ ಚಿತ್ರತಂಡ ನನ್ನನ್ನು ಸಂಪರ್ಕಿಸಿಲ್ಲ’ ಎಂದು ನಟಿ ರುಕ್ಮಿಣಿ ವಸಂತ್‌ ಹೇಳಿದ್ದಾರೆ.

25

 ಹೊಂಬಾಳೆ ಫಿಲಂಸ್‌ ಬ್ಯಾನರ್‌ನಡಿ ನಿರ್ಮಾಣವಾಗುತ್ತಿರುವ ರಾಘವೇಂದ್ರ ರಾಜ್‌ಕುಮಾರ್‌ ಪುತ್ರ ಯುವರಾಜ್‌ ಕುಮಾರ್‌ ನಟನೆಯ ಚಿತ್ರಕ್ಕೆ ರುಕ್ಮಿಣಿ ವಸಂತ್‌ ನಾಯಕಿಯಾಗಲಿದ್ದಾರೆ ಎನ್ನಲಾಗಿತ್ತು. ಆದರೆ ರುಕ್ಮಿಣಿ ಈ ಸುದ್ದಿ ನಿರಾಕರಿಸಿದ್ದಾರೆ. ಈ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

35

ಯುವ ಅವರ ಹೊಸ ಸಿನಿಮಾದ ಟೈಟಲ್‌ ಮಾ.17ರಂದು ಪುನೀತ್‌ ಹುಟ್ಟುಹಬ್ಬಕ್ಕೆ ಬಿಡುಗಡೆಯಾಗಲಿದೆ. ಸಂತೋಷ್‌ ಆನಂದ್‌ರಾಮ್‌ ನಿರ್ದೇಶನದ ಚಿತ್ರವಿದು. 

45

ರುಕ್ಮಿಣಿ ಈಗಾಗಲೇ ಸೂರಿ ನಿರ್ದೇಶನದ, ಶ್ರೀಮುರಳಿ ನಟನೆಯ ‘ಬಘೀರ’ ಚಿತ್ರಕ್ಕೆ ನಾಯಕಿಯಾಗಿದ್ದಾರೆ. ‘ಸಪ್ತಸಾಗರದಾಚೆ ಎಲ್ಲೋ ಸಿನಿಮಾದ ಶೂಟಿಂಗ್‌ನಲ್ಲಿದ್ದೇನೆ. 

55

ಶ್ರೀಮುರಳಿ ಕಾಲಿಗೆ ಏಟು ಬಿದ್ದು ಅವರು ವಿಶ್ರಾಂತಿಯಲ್ಲಿರುವ ಕಾರಣ ‘ಬಘೀರ’ ಸಿನಿಮಾದ ಶೂಟಿಂಗ್‌ ಸದ್ಯ ಸ್ಥಗಿತಗೊಂಡಿದೆ. ನನ್ನ ಭಾಗದ ಚಿತ್ರೀಕರಣ ಶ್ರೀಮುರಳಿ ಜೊತೆಗೇ ಇರುವ ಕಾರಣ ಅವರು ಬರದೇ ಶೂಟಿಂಗ್‌ ಸಾಧ್ಯವಿಲ್ಲ’ ಎಂದು ರುಕ್ಮಿಣಿ ತಿಳಿಸಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Photos on
click me!

Recommended Stories