ಕನ್ನಡ ನಿರ್ದೇಶಕ, ನಿರ್ಮಾಪಕರು ಕಿಚ್ಚ ಸುದೀಪ್ ಪ್ರತಿಭೆ ಬಳಸಿಕೊಳ್ಳುತ್ತಿಲ್ಲವೇಕೆ: ಕಾರಣವೇನು?

Published : Mar 16, 2026, 04:35 PM IST

‘ಬಿಲ್ಲಾ ರಂಗಾ ಬಾಷಾ’ ತೆಲುಗು ನಿರ್ಮಾಪಕರು ಮಾಡಬೇಕಿತ್ತಾದರೂ ಅವರು ಕೊಂಚ ಹೆಜ್ಜೆ ಹಿಂದೆ ಇಟ್ಟಿದ್ದಾರೆ ಎನ್ನಲಾಗಿದೆ. ಅದಕ್ಕಾಗಿ ಕಿಚ್ಚ ಸುದೀಪ್ ತೆಲುಗು ನಿರ್ದೇಶಕನ ಹೊಸ ಚಿತ್ರಕ್ಕೆ ಓಕೆ ಎಂದಿದ್ದಾರೆ ಎನ್ನಲಾಗಿದೆ.

PREV
15
ವಿಷಾದನೀಯ ಸಂಗತಿ

ಕಿಚ್ಚ ಸುದೀಪ್ ದೇಶವೇ ಮೆಚ್ಚಿದ ನಟ. ಆದರೆ ಅವರ ಪ್ರತಿಭೆಯನ್ನು ಬಳಸಿಕೊಳ್ಳಲು ಕನ್ನಡದ ನಿರ್ದೇಶಕ, ನಿರ್ಮಾಪಕರು ಹಿಂದೆ ಉಳಿಯುತ್ತಿರುವುದು ಸದ್ಯದ ವಿಷಾದನೀಯ ಸಂಗತಿ. ಅವರ ಹೊಸ ಸಿನಿಮಾವನ್ನು ತೆಲುಗು ನಿರ್ದೇಶಕ ನಿರ್ದೇಶನ ಮಾಡುತ್ತಿದ್ದು, ಮುಂದಿನ ತಿಂಗಳು ಚಿತ್ರೀಕರಣ ಆರಂಭವಾಗಲಿದೆ.

25
ಟೇಕಾಫ್ ಆಗುವುದು ಖಚಿತವಿಲ್ಲ

ಈ ನಡುವೆ ‘ಬಿಲ್ಲಾ ರಂಗಾ ಬಾಷಾ’ ಕುರಿತು ಯಾವುದೇ ಮಾಹಿತಿ ಲಭಿಸುತ್ತಿಲ್ಲ. ಗಾಂಧಿನಗರದ ಬಾತ್ಮಿದಾರರ ಪ್ರಕಾರ ಆ ಸಿನಿಮಾ ಸದ್ಯಕ್ಕೆ ಟೇಕಾಫ್ ಆಗುವುದು ಖಚಿತವಿಲ್ಲ. ಅದರ ಹೊರತಾಗಿ ಕನ್ನಡದ ನಿರ್ದೇಶಕ, ನಿರ್ಮಾಪಕರು ಯಾರಾದರೂ ಅವರಿಗೆ ಸಿನಿಮಾ ಮಾಡುತ್ತಿದ್ದಾರೆಯೇ ಎಂದು ನೋಡಿದರೆ ಉತ್ತರ ನಿರಾಶೆ.

35
ನಿರ್ಮಾಪಕರು ಮಾಡಿಲ್ಲ

‘ವಿಕ್ರಾಂತ್‌ ರೋಣ’ ಆದ ಮೇಲೆ ಅವರ ಯಾವ ಸಿನಿಮಾವನ್ನೂ ಕನ್ನಡದ ನಿರ್ದೇಶಕರು ಮತ್ತು ನಿರ್ಮಾಪಕರು ಮಾಡಿಲ್ಲ. ‘ಮ್ಯಾಕ್ಸ್‌’ ಮತ್ತು ‘ಮಾರ್ಕ್’ ಎರಡೂ ಸಿನಿಮಾ ತಮಿಳು ನಿರ್ದೇಶಕ, ನಿರ್ಮಾಪಕರುಗಳದು.

45
ಹೊಸ ಚಿತ್ರಕ್ಕೆ ಓಕೆ

‘ಬಿಲ್ಲಾ ರಂಗಾ ಬಾಷಾ’ ತೆಲುಗು ನಿರ್ಮಾಪಕರು ಮಾಡಬೇಕಿತ್ತಾದರೂ ಅವರು ಕೊಂಚ ಹೆಜ್ಜೆ ಹಿಂದೆ ಇಟ್ಟಿದ್ದಾರೆ ಎನ್ನಲಾಗಿದೆ. ಅದಕ್ಕಾಗಿ ಸುದೀಪ್ ತೆಲುಗು ನಿರ್ದೇಶಕನ ಹೊಸ ಚಿತ್ರಕ್ಕೆ ಓಕೆ ಎಂದಿದ್ದಾರೆ ಎನ್ನಲಾಗಿದೆ. ಈ ಮಧ್ಯೆ ಕನ್ನಡದ ನಿರ್ಮಾಪಕರು ಈ ಪ್ರತಿಭೆ ಬಳಸಿಕೊಳ್ಳಲು ಏಕೆ ಮುಂದಾಗುತ್ತಿಲ್ಲ ಎನ್ನುವುದು ದೊಡ್ಡ ಪ್ರಶ್ನೆಯಾಗಿದೆ.

55
ಸಿನಿಮಾ ಯಾವಾಗ ಸೆಟ್ಟೇರುತ್ತದೆ

ಕಾರ್ತಿಕ್‌ ಗೌಡ ಸಾರಥ್ಯದ ಕೆಆರ್‌ಜಿ ಸಂಸ್ಥೆ ಕಿಚ್ಚ ಸುದೀಪ್ ನಟನೆ, ನಿರ್ದೇಶನದ ಸಿನಿಮಾ ಘೋಷಣೆ ಮಾಡಿತ್ತು. ಆದರೆ ಆ ಸಿನಿಮಾ ಯಾವಾಗ ಸೆಟ್ಟೇರುತ್ತದೆ ಎಂಬ ಮಾಹಿತಿ ಇಲ್ಲ. ಕಿಚ್ಚ ಸುದೀಪ್ ಅವರು ಅಭಿಮಾನಿಗಳಿಗೆ ವರ್ಷಕ್ಕೊಂದು ಸಿನಿಮಾ ಕೊಡಬೇಕು ಎಂಬ ನಿರ್ಧಾರ ಮಾಡಿದ್ದರೂ ಕನ್ನಡದ ನಿರ್ಮಾಪಕರು ಯಾಕೆ ಮನಸ್ಸು ಮಾಡುತ್ತಿಲ್ಲ ಎಂಬುದಕ್ಕೆ ಸದ್ಯಕ್ಕಂತೂ ಉತ್ತರ ದೊರೆಯುತ್ತಿಲ್ಲ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Photos on
click me!

Recommended Stories