ಪ್ರತಿನಿತ್ಯ ಜೀವನಕ್ಕಾಗಿ ಎಷ್ಟೇ ಸಂಕಷ್ಟಗಳನ್ನು ಎದುರಿಸುತ್ತಾ, ಬಾಕ್ಸಿಂಗ್ ಕ್ರೀಡೆಯಲ್ಲಿ ಸಾಧನೆ ಮಾಡಿದರೂ ಇಲ್ಲಿ ಗುರುತಿಸುವವರು ಯಾರೂ ಇಲ್ಲ. ಬಾಕ್ಸಿಂಗ್ನಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡಿ ರಾಜ್ಯ ಮತ್ತು ರಾಷ್ಟ್ರಕ್ಕೆ ಕೀರ್ತಿ ತರಬೇಕು, ಉದ್ಯೋಗವನ್ನು ಕಂಡುಕೊಳ್ಳಬೇಕು ಎಂದು ವಿರಾಜ್ ಮೆಂಡನ್ ಸ್ಥಳೀಯ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದರು. ಆದರೆ, ಈಗ ಅವರೇ ಇಲ್ಲವಾಗಿದ್ದಾರೆ.