KPL ಕ್ರಿಕೆಟ್: ನೆರೆ ಸಂತ್ರಸ್ತರಿಗೆ ಬೆಳಕಾದ ಬೆಳಗಾವಿ ಪ್ಯಾಂಥರ್ಸ್!
First Published Aug 22, 2019, 12:33 PM ISTಕರ್ನಾಟಕ ಪ್ರಿಮಿಯರ್ ಲೀಗ್ ಟೂರ್ನಿ ಈ ಬಾರಿ ಹಲವು ಸಾಮಾಜಿಕ ಕಾರ್ಯಗಳಿಗೆ ಕೈಜೋಡಿಸಿದೆ. ಕಾವೇರಿ ಕೂಗು ಅಭಿಯಾನದ ಮೂಲಕ ಕಾವೇರಿ ನದಿ ಪುನಶ್ಚೇತನ ಹಾಗೂ ಪ್ರವಾಹದಲ್ಲಿ ಕೊಚ್ಚಿ ಹೋದ ಜನರ ಬದುಕನ್ನು ಮತ್ತೆ ಕಟ್ಟಿ ಕೊಡಲು ಮುಂದಾಗಿದೆ. ಫ್ರಾಂಚೈಸಿ ಕೂಡ ತಮ್ಮದೇ ಆದ ರೀತಿಯಲ್ಲಿ ನೆರ ಸಂತ್ರಸ್ತರಿಗೆ ನೆರವು ನೀಡುತ್ತಿದೆ. ಈ ಬಾರಿ ರಣಭೀಕರ ಮಳೆಗೆ ಬೆಳಗಾವಿ ತತ್ತರಿಸಿದೆ. ಪ್ರವಾಹದಲ್ಲಿ ಬೆಳಗಾವಿ ಜನತೆ ಮನೆಗಳು ಕೊಚ್ಚಿ ಹೋಗಿವೆ. ಇದೀಗ KPL ಟೂರ್ನಿಯ ಬೆಳಗಾವಿ ಪ್ಯಾಂಥರ್ಸ್ ತಂಡ ನೆರ ಸಂತ್ರಸ್ತರಿಗೆ ಅಗತ್ಯ ವಸ್ತುಗಳನ್ನು ಪೂರೈಸೋ ಮೂಲಕ ನೆರವು ನೀಡಿದೆ.