ಡಿಸಿಎಂ ಭೇಟಿಯಾಗಿ 30ಕ್ಕೂ ವಿವಿಧ ಮಠಗಳ ಸ್ವಾಮೀಜಿಗಳ ಚರ್ಚೆ

Suvarna News   | Asianet News
Published : Jun 11, 2021, 02:40 PM ISTUpdated : Jun 11, 2021, 02:47 PM IST

 ವಿವಿಧ ಜಿಲ್ಲೆಗಳ ವಿವಿಧ ಮಠಗಳ ಮೂವತ್ತಕ್ಕೂ ಹೆಚ್ಚು ಸ್ವಾಮೀಜಿಗಳು ಶುಕ್ರವಾರ ಬೆಳಗ್ಗೆ ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.   

PREV
16
ಡಿಸಿಎಂ ಭೇಟಿಯಾಗಿ 30ಕ್ಕೂ ವಿವಿಧ ಮಠಗಳ ಸ್ವಾಮೀಜಿಗಳ ಚರ್ಚೆ

ಮೂವತ್ತಕ್ಕೂ ಹೆಚ್ಚು ಸ್ವಾಮೀಜಿಗಳು ಶುಕ್ರವಾರ ಬೆಳಗ್ಗೆ ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. 

ಮೂವತ್ತಕ್ಕೂ ಹೆಚ್ಚು ಸ್ವಾಮೀಜಿಗಳು ಶುಕ್ರವಾರ ಬೆಳಗ್ಗೆ ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. 

26

ನಗರದ ಡಾಲರ್ಸ್‌ ಕಾಲೋನಿಯಲ್ಲಿರುವ ಡಿಸಿಎಂ ನಿವಾಸಕ್ಕೆ ಆಗಮಿಸಿದ ರಾಮನಗರ, ತುಮಕೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಶ್ರೀಗಳು, ಮಾಗಡಿ ತಾಲೂಕಿನಲ್ಲಿರುವ ಸಂಸ್ಕೃತ ವಿಶ್ವವಿದ್ಯಾಲಯವನ್ನು ಕ್ಷಿಪ್ರಗತಿಯಲ್ಲಿ ಅಭಿವೃದ್ಧಿ ಮಾಡುವುದೂ ಸೇರಿ ಕೆಲವಾರು ವಿಷಯಗಳ ಕುರಿತು ಡಿಸಿಎಂ ಅವರ ಚರ್ಚೆ ನಡೆಸಿದರು. 

ನಗರದ ಡಾಲರ್ಸ್‌ ಕಾಲೋನಿಯಲ್ಲಿರುವ ಡಿಸಿಎಂ ನಿವಾಸಕ್ಕೆ ಆಗಮಿಸಿದ ರಾಮನಗರ, ತುಮಕೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಶ್ರೀಗಳು, ಮಾಗಡಿ ತಾಲೂಕಿನಲ್ಲಿರುವ ಸಂಸ್ಕೃತ ವಿಶ್ವವಿದ್ಯಾಲಯವನ್ನು ಕ್ಷಿಪ್ರಗತಿಯಲ್ಲಿ ಅಭಿವೃದ್ಧಿ ಮಾಡುವುದೂ ಸೇರಿ ಕೆಲವಾರು ವಿಷಯಗಳ ಕುರಿತು ಡಿಸಿಎಂ ಅವರ ಚರ್ಚೆ ನಡೆಸಿದರು. 

36

ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ಕನ್ನಡಿಗರನ್ನೇ ನೇಮಕ ಮಾಡುವುದು ಹಾಗೂ ಸಂಸ್ಕೃತ ಪ್ರಸರಣೆಗೆ ಸೂಕ್ತ ಪ್ರೋತ್ಸಾಹ ಹಾಗೂ ಬಯಲುಸೀಮೆಯ ಈ ಜಿಲ್ಲೆಗಳಿಗೆ ನೀರಾವರಿ ಒದಗಿಸುವ ಬಗ್ಗೆ ಸ್ವಾಮೀಜಿಗಳು ಡಿಸಿಎಂ ಜತೆ ಮಾತುಕತೆ ನಡೆಸಿದರು. 

ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ಕನ್ನಡಿಗರನ್ನೇ ನೇಮಕ ಮಾಡುವುದು ಹಾಗೂ ಸಂಸ್ಕೃತ ಪ್ರಸರಣೆಗೆ ಸೂಕ್ತ ಪ್ರೋತ್ಸಾಹ ಹಾಗೂ ಬಯಲುಸೀಮೆಯ ಈ ಜಿಲ್ಲೆಗಳಿಗೆ ನೀರಾವರಿ ಒದಗಿಸುವ ಬಗ್ಗೆ ಸ್ವಾಮೀಜಿಗಳು ಡಿಸಿಎಂ ಜತೆ ಮಾತುಕತೆ ನಡೆಸಿದರು. 

46

ಅಖಿಲ ಭಾರತ ಸನಾತನ ಮಠಾಧಿಪತಿಗಳ ಒಕ್ಕೂಟದ ಸೇವಾ ಟ್ರಸ್ಟ್‌ ವತಿಯಿಂದ ಕೊಳದ ಮಠದ ಶ್ರೀ ಶಾಂತವೀರ ಸ್ವಾಮೀಜಿ, ಶ್ರೀ ಬಸವಲಿಂಗ ಸ್ವಾಮೀಜಿ, ತುಮಕೂರು ಹಿರೇಮಠದ ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ, ಸೋಲೂರು ಚಿಲುಮ ಮಠದ ಶ್ರೀ ಬಸವಲಿಂಗ ಸ್ವಾಮೀಜಿ, ಭದ್ರಗಿರಿ ಮಠದ ಶ್ರೀ ವೀರಭದ್ರ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ತಮ್ಮಿಡಿಹಳ್ಳಿ ಮಠದ ಶ್ರೀ ಸಿದ್ದಲಿಂಗ ದೇಶಿಕೇಂದ್ರ ಸ್ವಾಮೀಜಿ ಸೇರಿದಂತೆ ಅನೇಕ ಶ್ರೀಗಳು ಆಗಮಿಸಿದ್ದರು. 

ಅಖಿಲ ಭಾರತ ಸನಾತನ ಮಠಾಧಿಪತಿಗಳ ಒಕ್ಕೂಟದ ಸೇವಾ ಟ್ರಸ್ಟ್‌ ವತಿಯಿಂದ ಕೊಳದ ಮಠದ ಶ್ರೀ ಶಾಂತವೀರ ಸ್ವಾಮೀಜಿ, ಶ್ರೀ ಬಸವಲಿಂಗ ಸ್ವಾಮೀಜಿ, ತುಮಕೂರು ಹಿರೇಮಠದ ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ, ಸೋಲೂರು ಚಿಲುಮ ಮಠದ ಶ್ರೀ ಬಸವಲಿಂಗ ಸ್ವಾಮೀಜಿ, ಭದ್ರಗಿರಿ ಮಠದ ಶ್ರೀ ವೀರಭದ್ರ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ತಮ್ಮಿಡಿಹಳ್ಳಿ ಮಠದ ಶ್ರೀ ಸಿದ್ದಲಿಂಗ ದೇಶಿಕೇಂದ್ರ ಸ್ವಾಮೀಜಿ ಸೇರಿದಂತೆ ಅನೇಕ ಶ್ರೀಗಳು ಆಗಮಿಸಿದ್ದರು. 

56

ಸ್ವಾಮೀಜಿ ನೀಡಿದ ಮನವಿ ಪತ್ರ ಸ್ವೀಕರಿಸಿದ ಡಿಸಿಎಂ ಅವರು, ಅತಿ ಶೀಘ್ರದಲ್ಲೇ ಸಂಸ್ಕೃತ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ಕೆಲಸಗಳನ್ನು ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು. 

ಸ್ವಾಮೀಜಿ ನೀಡಿದ ಮನವಿ ಪತ್ರ ಸ್ವೀಕರಿಸಿದ ಡಿಸಿಎಂ ಅವರು, ಅತಿ ಶೀಘ್ರದಲ್ಲೇ ಸಂಸ್ಕೃತ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ಕೆಲಸಗಳನ್ನು ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು. 

66

 ನಮ್ಮ ಸರ್ಕಾರ ‌ನೀರಾವರಿ ಯೋಜನೆಗಳ ಅನುಷ್ಠಾಕ್ಕೆ ಆದ್ಯತೆ‌ ನೀಡಲಿದೆ‌ ಎಂದು‌ ಡಿಸಿಎಂ ಅವರು ಸ್ವಾಮೀಜಿಗಳಿಗೆ ಭರವಸೆ ನೀಡಿದರು.

 ನಮ್ಮ ಸರ್ಕಾರ ‌ನೀರಾವರಿ ಯೋಜನೆಗಳ ಅನುಷ್ಠಾಕ್ಕೆ ಆದ್ಯತೆ‌ ನೀಡಲಿದೆ‌ ಎಂದು‌ ಡಿಸಿಎಂ ಅವರು ಸ್ವಾಮೀಜಿಗಳಿಗೆ ಭರವಸೆ ನೀಡಿದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories