ಶಾಲೆಗೆ ಬರುವ ಮಕ್ಕಳಿಗೆ ಜ್ವರ, ಕೆಮ್ಮು ಸೇರಿ ಇತರೆ ಕೋವಿಡ್ ಲಕ್ಷಣಗಳಿದ್ದಲ್ಲಿ ಅಂಥ ಮಕ್ಕಳಿಗೆ ರಜೆ ಕೊಟ್ಟು ಮನೆಗೆ ಕಳುಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡಕ್ ಸೂಚನೆ ನೀಡಿದ್ದಾರೆ. ಗರ್ಭಿಣಿಯರು, ಅನಾರೋಗ್ಯ ಪೀಡಿತರು ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸೂಚನೆ ನೀಡಲಾಗಿದೆ.