ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಅನ್ನೋದು ಉತ್ತರಕನ್ನಡ ಜಿಲ್ಲೆಯ ಜನರ ದೊಡ್ಡ ಕನಸ್ಸು. ಜಿಲ್ಲೆಯಲ್ಲಿ ಹಲವಾರು ವರ್ಷದಿಂದ ಸುಸಜ್ಜಿತ ಆಸ್ಪತ್ರೆ ನಿರ್ಮಿಸುವಂತೆ ಹೋರಾಟ ಮಾಡುತ್ತಲೇ ಬರುತ್ತಿದ್ದಾರೆ.
ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ಇಲ್ಲದ ಕಾರಣ ಸಾವಿರಾರು ಜನರು ಸಾವನ್ನಪ್ಪಿದ್ದು, ಸರ್ಕಾರ ಕಣ್ಣು ತೆರೆಯುವಂತೆ ಹೋರಾಟಗಳು ನಡೆಯುತ್ತಲೇ ಇವೆ. ಪ್ರತೀ ಚುನಾವಣೆಯಲ್ಲಿ ಇದೇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಅನ್ನೋದು ಚುನಾವಣೆಯ ವಿಷಯ ವಸ್ತು ಸಹ ಆಗಿದ್ರೂ ಚುನಾವಣೆ ಮುಗಿದ ಬಳಿಕ ಯಾವ ಸರಕಾರ ಕೂಡಾ ಸ್ಪಂದಿಸಿಲ್ಲ.