
ಸಚಿವ ಆನಂದ್ ಸಿಂಗ್ ಅವರ ಆಸೆ ಈಡೇರಿದ್ದು, ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ ಜಿಲ್ಲೆ ಉದಯಿಸಿದ್ದು, ನೂತನ ಜಿಲ್ಲೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಉದ್ಘಾಟಿಸಿದರು.
ಜಿಲ್ಲಾ ಕೇಂದ್ರ ಹೊಸಪೇಟೆಯಲ್ಲಿ ಆಯೋಜಿಸಿದ್ದ ಅದ್ಧೂರಿ ಕಾರ್ಯಕ್ರಮದಲ್ಲಿ ಇಂದು (ಅ.02) ವಿಜಯನಗರ ನೂತನ ಜಿಲ್ಲೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಉದ್ಘಾಟಿಸಿದರು.
ಬಳಿಕ ವೇದಿಕೆಯಲ್ಲಿ ಸರ್ವಧರ್ಮ ಪ್ರಾರ್ಥನೆಯನ್ನು ಶಾಲಾ ಮಕ್ಕಳು ನೆರವೇರಿಸಿದರು. ಇದೇ ವೇಳೆ ವಿಜಯನಗರ ಸಾಮ್ರಾಜ್ಯದ ಗತವೈಭವವನ್ನು ಸಾರಿ ಹೇಳುವ ವಿದ್ಯಾರಣ್ಯ ವೇದಿಕೆಯಲ್ಲಿ 464 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ ಸಿಕ್ಕಿತು.
ಹೊಸಪೇಟೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸಜ್ಜಾದ ಭವ್ಯವಾದ ವೇದಿಕೆಯನ್ನು ವಿಜಯನಗರ ಕಾಲದ ಹಂಪಿಯ ಮಾತಂಗ ಪರ್ವತ, ವಿರುಪಾಕ್ಷ ದೇವಸ್ಥಾನ ರಾಜಗೋಪುರ ನಿರ್ಮಾಣ ಮಾಡಿದ ಶೈಲಿಯಲ್ಲಿ ವೇದಿಕೆ ಸಜ್ಜುಗೊಂಡಿತ್ತು. ಹೊಸಪೇಟೆ ನಗರ ಸಂಪೂರ್ಣ ದೀಪಾಲಂಕಾರದಿಂದ ಕಂಗೊಳಿಸಿತ್ತು.
ವೇದಿಕೆಯಲ್ಲಿ ಸರ್ವಧರ್ಮ ಪ್ರಾರ್ಥನೆಯನ್ನು ಶಾಲಾ ಮಕ್ಕಳು ನೆರವೇರಿಸಿದರು. ಕಾರ್ಯಕ್ರಮ ವೀಕ್ಷಣೆಗೆ ಕಿಕ್ಕಿರುದು ಜನ ಸೇರಿದ್ದರು. ನಿರೀಕ್ಷೆಗೂ ಮೀರಿ ಜನ ಸೇರಿದ್ದರಿಂದ ಕಾರ್ಯಕ್ರಮ ವೀಕ್ಷಿಸಲು ನೂಕು ನುಗ್ಗಲು ಉಂಟಾಯಿತು.ಜನರನ್ನು ನಿಯಂತ್ರಣ ಮಾಡಲು ಪೊಲೀಸರು ಹರಸಾಹಸ ಪಟ್ಟರು
ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರವನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಜಿಲ್ಲಾ ಕೇಂದ್ರ ಹೊಸಪೇಟೆಯಲ್ಲಿ ಆಯೋಜಿಸಿದ್ದ ಅದ್ಧೂರಿ ಕಾರ್ಯಕ್ರಮದಲ್ಲಿ ನೂತನ ಜಿಲ್ಲೆಯನ್ನು ಇಂದು (ಅ.02) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಉದ್ಘಾಟಿಸಿದರು.
ವಿಜಯನಗರ ಜಿಲ್ಲೆಯನ್ನಾಗಿ ಘೋಷಣೆ ಮಾಡಿದ್ದ ಬಿಎಸ್ ಯಡಿಯೂರಪ್ಪ ಅವರು ಸಹ ಜಿಲ್ಲೆ ಉದ್ಘಾಟನೆ ಸಮಾರಂಭಕ್ಕೆ ಹಾಜರಾಗಿರುವುದು ವಿಶೇಷವಾಗಿತ್ತು. ಸ್ವತಃ ಆನಂದ್ ಸಿಂಗ್ ಅವರು ಜಿಲ್ಲಾ ವಿಭಜನೆ ಮಾಡಿದ್ದ ಬಿಎಸ್ವೈ ಅವರನ್ನು ಬರಮಾಡಿಕೊಂಡರು.
Vijayanagara
ಈ ಮೊದಲು ಬಳ್ಳಾರಿಗೆ ಸೇರಿದ್ದ ಹೊಸಪೇಟೆ, ಕೂಡ್ಲಿಗಿ, ಹಗರಿ ಬೊಮ್ಮನಹಳ್ಳಿ, ಕೊಟ್ಟೂರು, ಹೂವಿನಹಡಗಲಿ ಮತ್ತು ಹರಪನಹಳ್ಳಿ ತಾಲ್ಲೂಕುಗಳು ವಿಜಯನಗರ ನೂತನ ಜಿಲ್ಲೆಯಲ್ಲಿ ಇರಲಿವೆ. ಬಳ್ಳಾರಿ ಜಿಲ್ಲೆಯಿಂದ ವಿಭಜನೆ ಮಾಡಿ ವಿಜಯನಗರ ಎಂಬ ಪ್ರತ್ಯೇಕ ಜಿಲ್ಲೆಯನ್ನು ರಚಿಸಬೇಕೆಂಬ ಒತ್ತಾಯ ಹಲವು ವರ್ಷಗಳಿಂದ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೂತನ ಜಿಲ್ಲೆಯನ್ನಾಗಿ ವಿಜಯನಗರವನ್ನು ಘೋಷಿಸಿ ಆದೇಶ ಹೊರಡಿಸಿತ್ತು.
ಜಿಲ್ಲಾ ವಿಭಜನೆಗೆ ವಿರೋಧ ಮಾಡಿದ್ದ ಸೋಮಶೇಖರ್ ರೆಡ್ಡಿ, ಹರಪನಹಳ್ಳಿ ಶಾಸಕ ಕರುಣಾಕರ ರೆಡ್ಡಿ, ಹಗರಿ ಬೊಮ್ಮನಹಳ್ಳಿ ಶಾಸಕ ಭೀಮಾ ನಾಯಕ್, ಸಂಡೂರು ಶಾಸಕ ತುಕಾರಮ್, ಕಂಪ್ಲಿ ಶಾಸಕ ಜೆ.ಎನ್ ಗಣೇಶ್, ಬಳ್ಳಾರಿ ಗ್ರಾಮೀಣ ಶಾಸಕ ನಾಗೇಂದ್ರ ಸಿರಗುಪ್ಪಾ, ಶಾಸಕ ಸೋಮಲಿಂಗಪ್ಪಾ ಗೈರು ಎದ್ದು ಕಾಣುತ್ತಿತ್ತು.