ಬೆಂಗಳೂರಲ್ಲಿ ಮಳೆ ಅನಾಹುತ ಪ್ರದೇಶಗಳಿಗೆ ಮೇಯರ್‌, ಆಯುಕ್ತರ ಭೇಟಿ

First Published Sep 10, 2020, 7:42 AM IST

ಬೆಂಗಳೂರು(ಸೆ.10): ಬಿಬಿಎಂಪಿ ಮೇಯರ್‌ ಗೌತಮ್‌ ಕುಮಾರ್‌ ಹಾಗೂ ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್‌ ಅವರು ಮಂಗಳವಾರ ಮಳೆಯಿಂದ ಜಲಾವೃತಗೊಂಡ ಹೆಣ್ಣೂರು, ಮನೋರಾಯನ ಪಾಳ್ಯ ಸೇರಿದಂತೆ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 
 

ಹೆಣ್ಣೂರು, ಕೆ.ಆರ್‌.ಪುರ ಸೇರಿದಂತೆ ಇನ್ನಿತರ ಮಳೆ ಹಾನಿ ಪ್ರದೇಶಗಳಿಗೆ ಪರಿಶೀಲನೆ ನಡೆಸಿದ ಆಯುಕ್ತ ಗೌತಮ್‌ ಕುಮಾರ್‌
undefined
ಮಂಗಳವಾರ ಸುರಿದ ಮಳೆಯಿಂದ ಸುಮಾರು 200 ಮನೆಗಳಿಗೆ ನೀರು ನುಗ್ಗಿದೆ. ಬೆಂಗಳೂರಿನಲ್ಲಿ ಇನ್ನೂ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ರಕ್ಷಣಾ ಕಾರ್ಯಗಳು ನಡೆಯುತ್ತಿವೆ ಎಂದು ತಿಳಿಸಿದ ಬಿಬಿಎಂಪಿ ಮೇಯರ್‌ ಗೌತಮ್‌ ಕುಮಾರ್‌
undefined
ನಗರದ ಅನೇಕ ಕಡೆ ಅಪಾರ್ಟ್‌ಮೆಂಟ್‌ಗಳ ಅನಧಿಕೃತವಾಗಿ ಕೊಳಚೆ ನೀರನ್ನು ರಾಜಕಾಲುವೆಗೆ ಹರಿಬಿಡಲು ಕೊಳವೆ ಹಾಕಲಾಗಿದೆ.
undefined
ಕೊಳವೆಗಳ ಮೂಲಕ ನೀರು ಅಪಾರ್ಟ್‌ಮೆಂಟ್‌ಗಳಿಗೆ ನುಗ್ಗಿದೆ. ಇನ್ನು ಹಲವು ಕಡೆ ರಾಜಕಾಲುವೆ, ನೀರುಗಾಲುವೆಗಳನ್ನು ಒತ್ತುವರಿ ಮಾಡಿಕೊಂಡ ಪರಿಣಾಮ ಸಮಸ್ಯೆ ಆಗುತ್ತಿದೆ. ಹಾಗಾಗಿ, ಒತ್ತುವರಿ ತೆರವಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
undefined
click me!