ಇದೇ ವೇಳೆ ನಾಗವಾರ ಹೊರವರ್ತುಲ ರಸ್ತೆ ಮಾರ್ಗ ಹಾಗೂ ಮೇಲ್ಸೇತುವೆ ಇಕ್ಕೆಲಗಳಲ್ಲಿ ಸಂಗ್ರಹವಾಗಿರುವ ಕಸ (ಮಣ್ಣಿನ ಧೂಳು)ತೆರವು ಮಾಡಬೇಕು, ಹೆಣ್ಣೂರು ಮುಖ್ಯರಸ್ತೆಯ ಹೆಣ್ಣೂರು ಬಂಡೆಯ ಬಳಿ ರಸ್ತೆ ಅಗಲೀಕರಣ ಕಾಮಗಾರಿ ಪೂರ್ಣಗೊಳಿಸಿ ವಾಹನ ಸವಾರರ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಬೇಕು, ರಸ್ತೆ ಕಾಮಗಾರಿ ನಡೆಸುವ ವೇಳೆ ವಾಹನ ಸವಾರರಿಗೆ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಮೇಯರ್ ತಿಳಿಸಿದರು. ಸಜ್ಜನ್ ರಾವ್ ವೃತ್ತದಿಂದ ಕನ್ನಿಕಾ ಪರಮೇಶ್ವರಿ ರಸ್ತೆಯವರೆಗೆ ನಡೆಯುತ್ತಿರುವ ಒಂದು ಕಿ.ಮೀ. ವೈಟ್ ಟಾಪಿಂಗ್ ಕಾಮಗಾರಿ ಪರಿಶೀಲನೆ ನಡೆಸಿದರು. ವೈಟ್ಟಾಪಿಂಗ್ ಕಾಮಗಾರಿ ಮುಗಿಯುವ ಹಂತದಲ್ಲಿದ್ದು, ಪಾದಚಾರಿ ಮಾರ್ಗ ಶೀಘ್ರ ಮುಗಿಸಲು ಸೂಚನೆ ನೀಡಿದರು.
ಇದೇ ವೇಳೆ ನಾಗವಾರ ಹೊರವರ್ತುಲ ರಸ್ತೆ ಮಾರ್ಗ ಹಾಗೂ ಮೇಲ್ಸೇತುವೆ ಇಕ್ಕೆಲಗಳಲ್ಲಿ ಸಂಗ್ರಹವಾಗಿರುವ ಕಸ (ಮಣ್ಣಿನ ಧೂಳು)ತೆರವು ಮಾಡಬೇಕು, ಹೆಣ್ಣೂರು ಮುಖ್ಯರಸ್ತೆಯ ಹೆಣ್ಣೂರು ಬಂಡೆಯ ಬಳಿ ರಸ್ತೆ ಅಗಲೀಕರಣ ಕಾಮಗಾರಿ ಪೂರ್ಣಗೊಳಿಸಿ ವಾಹನ ಸವಾರರ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಬೇಕು, ರಸ್ತೆ ಕಾಮಗಾರಿ ನಡೆಸುವ ವೇಳೆ ವಾಹನ ಸವಾರರಿಗೆ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಮೇಯರ್ ತಿಳಿಸಿದರು. ಸಜ್ಜನ್ ರಾವ್ ವೃತ್ತದಿಂದ ಕನ್ನಿಕಾ ಪರಮೇಶ್ವರಿ ರಸ್ತೆಯವರೆಗೆ ನಡೆಯುತ್ತಿರುವ ಒಂದು ಕಿ.ಮೀ. ವೈಟ್ ಟಾಪಿಂಗ್ ಕಾಮಗಾರಿ ಪರಿಶೀಲನೆ ನಡೆಸಿದರು. ವೈಟ್ಟಾಪಿಂಗ್ ಕಾಮಗಾರಿ ಮುಗಿಯುವ ಹಂತದಲ್ಲಿದ್ದು, ಪಾದಚಾರಿ ಮಾರ್ಗ ಶೀಘ್ರ ಮುಗಿಸಲು ಸೂಚನೆ ನೀಡಿದರು.