ಬೆಂಗಳೂರಿನಿಂದ 18 ಕೋಟಿ ಮೌಲ್ಯದ ಚಿನ್ನವನ್ನು ಈ ಗ್ಯಾಂಗ್ ನೇಪಾಳಕ್ಕೆ ಸಾಗಿಸಿದ ಹಾದಿ ಸಿನಿಮಾ ಕಥೆಯನ್ನೂ ಮೀರಿಸುವಂತಿದೆ.
ತಾಂತ್ರಿಕ ದಾಖಲೆಗಳ ಪ್ರಕಾರ ಆರೋಪಿಗಳ ಪಯಣ ಹೀಗಿತ್ತು:
ಜನವರಿ 25 ಮುಂಜಾನೆ: ದರೋಡೆ ಮುಗಿಸಿ ಯಮಲೂರಿನಿಂದ ಬಿಎಂಟಿಸಿ ಬಸ್ ಏರಿದ ಗ್ಯಾಂಗ್, ಮಾರತ್ಹಳ್ಳಿ ಬ್ರಿಡ್ಜ್ - ಟಿನ್ ಫ್ಯಾಕ್ಟರಿ - ರಿಂಗ್ ರೋಡ್ - ಹೆಬ್ಬಾಳ ಮಾರ್ಗವಾಗಿ ಯಶವಂತಪುರ ತಲುಪಿತು.
ಯಶವಂತಪುರ ಟು ಮುಂಬೈ: ಯಶವಂತಪುರದಿಂದ ಖಾಸಗಿ ಬಸ್ ಮೂಲಕ ನೇರವಾಗಿ ಮಹಾರಾಷ್ಟ್ರದ ಮುಂಬೈಗೆ ಪರಾರಿಯಾದರು.
ಮುಂಬೈ ಟು ಲಕ್ನೋ: ಮುಂಬೈನಿಂದ ರೈಲು ಅಥವಾ ಬಸ್ ಮೂಲಕ ಉತ್ತರ ಪ್ರದೇಶದ ಲಕ್ನೋ ತಲುಪಿದರು.
ಬಾರ್ಡರ್ ದಾಟಿದ್ದು ಹೀಗೆ: ಲಕ್ನೋದಿಂದ ಸುಮಾರು 200 ಕಿಲೋಮೀಟರ್ ದೂರದಲ್ಲಿರುವ 'ರುಪಾಡಿಯಾ' ಎಂಬ ಗಡಿ ಪ್ರದೇಶಕ್ಕೆ ತೆರಳಿದ ಗ್ಯಾಂಗ್, ಅಲ್ಲಿನ ಅತೀ ಸೂಕ್ಷ್ಮ ಹಾಗೂ ಕಳ್ಳದಾರಿಗಳ ಮೂಲಕ ನೇಪಾಳಕ್ಕೆ ಪ್ರವೇಶ ಮಾಡಿದೆ.
ಅಂತಿಮ ತಾಣ: ಚಿನ್ನದ ದೊಡ್ಡ ಚೀಲದೊಂದಿಗೆ ನೇಪಾಳದ 'ಗಂಜ್' ಎಂಬ ಪ್ರದೇಶಕ್ಕೆ ತಲುಪಿದ ಆರೋಪಿಗಳು ಅಲ್ಲಿಂದ ಎಲ್ಲಿಗೆ ಹೋದರು ಎಂಬುದು ಈಗ ಯಕ್ಷಪ್ರಶ್ನೆಯಾಗಿದೆ.