ಬೆಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಓಣಂ ಹಬ್ಬದ ನಂತರ ಕೇರಳ ಮೂಲದ ಜೂನಿಯರ್ ಮತ್ತು ಸೀನಿಯರ್ ವಿದ್ಯಾರ್ಥಿಗಳ ನಡುವೆ ಬೀದಿ ಕಾಳಗ ನಡೆದಿದೆ. ಇದರಲ್ಲಿ ನಿಮ್ಮ ಮಕ್ಕಳೂ ಇದ್ದಾರಾ ಒಮ್ಮೆ ನೋಡಿ..
ಬೆಂಗಳೂರು (ಸೆ.18): ನಗರದ ಹೊರವಲಯದಲ್ಲಿರುವ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಓಣಂ ಹಬ್ಬದ ನಂತರ ಪರಸ್ಪರ ಹೊಡೆದಾಡಿಕೊಂಡ ಘಟನೆ ನಡೆದಿದೆ. ಕೇರಳ ಮೂಲದ ಜೂನಿಯರ್ ಮತ್ತು ಸೀನಿಯರ್ ವಿದ್ಯಾರ್ಥಿಗಳ ನಡುವೆ ನಡೆದ ಈ ಮಾರಾಮಾರಿಯಿಂದ ಆತಂಕದ ವಾತಾವರಣ ನಿರ್ಮಾಣವಾಗಿದೆ.
25
ಘಟನೆ ವಿವರ
ನಿನ್ನೆ ಮಧ್ಯಾಹ್ನ, ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕಾಲೇಜಿನ ಮುಂಭಾಗದಲ್ಲಿ ಈ ಘಟನೆ ನಡೆದಿದೆ. ಓಣಂ ಹಬ್ಬದ ನಂತರ ಕ್ಷುಲ್ಲಕ ಕಾರಣಕ್ಕೆ ಜೂನಿಯರ್ ಮತ್ತು ಸೀನಿಯರ್ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಮಾತಿಗೆ ಮಾತು ಬೆಳೆದು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.
ಘಟನೆಯ ಕುರಿತು ದೂರು ದಾಖಲಾಗದಿದ್ದರೂ, ಪೊಲೀಸರು ಮತ್ತು ಕಾಲೇಜು ಆಡಳಿತ ಮಂಡಳಿ ಮಧ್ಯ ಪ್ರವೇಶಿಸಿ ವಿದ್ಯಾರ್ಥಿಗಳಿಂದ ತಪ್ಪೊಪ್ಪಿಗೆ ಪತ್ರ ಬರೆಸಿಕೊಂಡಿದ್ದಾರೆ.
35
ಎರಡು ಗುಂಪುಗಳಾಗಿ ಭಾರೀ ಫೈಟ್
ವಿದ್ಯಾರ್ಥಿಗಳು ಸಿನಿಮಾ ಶೈಲಿಯಲ್ಲಿ ಎರಡು ಗುಂಪುಗಳಾಗಿ ಭಾರೀ ಫೈಟ್ ಮಾಡಿದ್ದಾರೆ. ಗೂಳಿ ಕಾಳಗದಂತೆ ನೂರಾರು ವಿದ್ಯಾರ್ಥಿಗಳು ರಸ್ತೆಯಲ್ಲಿ ಪರಸ್ಪರ ಮಾರಾಮಾರಿಯಾಗಿ ಹೊಡೆದಾಡಿಕೊಂಡಿದ್ದಾರೆ. ಇದರಿಂದ ಸ್ಥಳೀಯರಲ್ಲಿ ಆತಂಕ ಮೂಡಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ವಿದ್ಯಾರ್ಥಿಗಳು ಪುಂಡಾಟಿಕೆ ಮೆರೆಯದಂತೆ ಕಡಿವಾಣ ಹಾಕಲು ಮನವಿ ಮಾಡಿದ್ದಾರೆ.
ಗಲಾಟೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಈ ಘಟನೆಯಿಂದ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಬಹುದು ಎಂದು ಕಾಲೇಜು ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿ ಆತಂಕ ವ್ಯಕ್ತಪಡಿಸಿದ್ದಾರೆ. ಹಾಗಾಗಿ, ಯಾವುದೇ ಅಧಿಕೃತ ದೂರು ದಾಖಲಿಸದೆ, ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಮುಂದೆ ಈ ರೀತಿ ಮಾಡುವುದಿಲ್ಲ ಎಂದು 'ತಪ್ಪೊಪ್ಪಿಗೆ ಪತ್ರ' ಬರೆಸಿಕೊಳ್ಳಲಾಗಿದೆ.
55
ಶಿಸ್ತು ಕಾಪಾಡುವಲ್ಲಿ ಕಾಲೇಜು ವಿಫಲ
ಪೊಲೀಸರು ಈ ವಿದ್ಯಾರ್ಥಿಗಳನ್ನು ತೀವ್ರ ವಿಚಾರಣೆ ನಡೆಸಿದ್ದು, ಹೊಡೆದಾಟಕ್ಕೆ ಕಾರಣವೇನೆಂದು ಪರಿಶೀಲಿಸುತ್ತಿದ್ದಾರೆ. ಈ ಘಟನೆಯು ಕಾಲೇಜು ಆವರಣದಲ್ಲಿ ಶಿಸ್ತು ಮತ್ತು ಸೌಹಾರ್ದತೆ ಕಾಪಾಡುವಲ್ಲಿ ಕಾಲೇಜು ಆಡಳಿತ ಮಂಡಳಿ ವಿಫಲವಾಗಿರುವುದನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ