ಪ್ರಿಯ ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ನಗರ ಯೋಜಕರು (ಇನ್ನೂ ಯಾರಾದರೂ ಇದ್ದರೆ)
ಮತ್ತೊಂದು ವರ್ಷ, ಮತ್ತೊಂದು ಪ್ರವಾಹ. ಮತ್ತೊಂದು ಫೋಟೋ ಆಪ್. ಬೆಂಗಳೂರನ್ನು ತಮ್ಮ ವೈಯಕ್ತಿಕ ಹಿತಾಸಕ್ತಿಯ ಮಂಡಳಿಯಂತೆ ಪರಿಗಣಿಸುವ ನಾಯಕರಿಂದ ಮತ್ತೊಂದು ಸುತ್ತಿನ ಕರುಣಾಜನ ಕಥೆ, ಮೊಸಳೆ ಕಣ್ಣೀರು ಮತ್ತು ವಿಪತ್ತು ನಿರ್ವಹಣೆಗೆ ಭೇಟಿ. ಇದನ್ನು ಬಿಟ್ಟರೆ ನಿಮ್ಮಿಂದ ಏನಾದರೂ ನಿರೀಕ್ಷಿಸಬಹುದೇ?
ಕಳೆದ ಬಾರಿ ಬೆಂಗಳೂರು ಪ್ರವಾಹ ಬಂದಾಗ ಹೊಸ ಸರ್ಕಾರ, ಸಿದ್ಧತೆ ಮಾಡಿಕೊಂಡಿರಲಿಲ್ಲ, ನೀರಿಗೆ ಮುಳುಗುವುದು ಗೊತ್ತಿರಲಿಲ್ಲ. ಹೀಗೆ ನೋರೆಂಟು ನೆಪ ಹೇಳಿದ ಜನಪ್ರತಿನಿಧಿಗಳು, ಸರ್ಕಾರದ ಪ್ರತಿನಿಧಿಗಳು ಒಂದು ವರ್ಷವಾದರೂ ಏನು ಮಾಡುತ್ತಿದ್ದೀರಿ. ಇದೀಗ ಪುನಃ ಪ್ರವಾಹ ಬಂದಿದೆ. ಬೆಂಗಳೂರು ಜನರ ಬದುಕು ನೀರಿನಲ್ಲಿ ಮುಳುಗಿ ಹೋಗಿದೆ.
ಇದೀಗ ಬೆಂಗಳೂರಿಗೆ ಬಂದಿರುವುದು ನೀರಿ ಪ್ರವಾಗ ಮಾತ್ರವಲ್ಲ, ನಮ್ಮ ಗಂಟಲುಗಳನ್ನು ಉಸಿರುಗಟ್ಟಿಸುವ, ನಮ್ಮ ಮನೆಗಳಿಗೆ ನುಸುಳುವ ನಮ್ಮ ಜನರನ್ನು ಕೊಲ್ಲುವ ಆಡಳಿತ ವೈಫಲ್ಯದ ಸಾಮೂಹಿಕ ಹೊಲಸು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.