ಹೈಕಮಾಂಡ್ ಭೇಟಿ ಮಾಡಲಿರುವ ಸಿಎಂ, ಡಿಸಿಎಂ
ಈ ದುರಂತವನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಹೈಕಮಾಂಡ್, ಹೆಚ್ಚಿನ ಮಾಹಿತಿಗಾಗಿ ನೇರವಾಗಿ ರಾಜ್ಯದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಬಳಿ ಮಾಹಿತಿ ಕೇಳಲಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು, ಮೊದಲ ಬಾರಿಗೆ ನಾಯಕರು ಒಟ್ಟಿಗೆ ತೆರಳಿ ಹೈಕಮಾಂಡ್ ರನ್ನು ಭೇಟಿ ಮಾಡಲಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ನಾಯಕ ರಾಹುಲ್ ಗಾಂಧಿಯವರನ್ನು ಬೆಳಿಗ್ಗೆ 11 ಗಂಟೆಗೆ ಭೇಟಿ ಮಾಡಿ, ದುರಂತದ ಕುರಿತು ಸಂಪೂರ್ಣ ಮಾಹಿತಿ ನೀಡಲಿದ್ದಾರೆ.
ಸಿಎಂ ಮತ್ತು ಡಿಸಿಎಂ ಅವರು ಕಾಲ್ತುಳಿತದ ಘಟನೆ, ತನಿಖೆಯ ಪ್ರಗತಿ, ಸರ್ಕಾರ ಕೈಗೊಂಡ ಕ್ರಮಗಳು ಮತ್ತು ಅಧಿಕಾರಿಗಳ ವಿರುದ್ಧ ನಡೆದ ಕ್ರಮಗಳ ಕುರಿತು ಸಂಪೂರ್ಣ ವರದಿ ಸಲ್ಲಿಸಲಿದ್ದಾರೆ. ಪೊಲೀಸ್ ಅಧಿಕಾರಿಗಳ ಅಮಾನತು ಕೂಡ ಸಾರ್ವಜನಿಕ ಟೀಕೆಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ, ಹೈಕಮಾಂಡ್ ಈ ಕುರಿತು ಸ್ಪಷ್ಟನೆ ಪಡೆಯಲು ಮುಂದಾಗಿದೆ. ಈ ಘಟನೆ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿರುವುದರಿಂದ, ಇದನ್ನು ರಾಜಕೀಯ ಪಕ್ಷವೂ ಗಂಭೀರವಾಗಿ ತೆಗೆದುಕೊಂಡಿದೆ.