Bharat Jodo Yatra; ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನಕ್ಕೆ ರಾಹುಲ್ ಗಾಂಧಿ‌ ಭೇಟಿ

First Published Oct 2, 2022, 10:42 PM IST

ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ ಅವರು ಆಯೋಜಿಸಿರುವ ಭಾರತ್‌ ಜೋಡೋ ಯಾತ್ರೆಯು ಭಾನುವಾರ ಸಂಜೆ ಮೈಸೂರು ತಲುಪಿತು. ಇದಕ್ಕೂ ಮುನ್ನ  ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ವಿಶೇಷ ಪೂಜೆ ಸಲ್ಲಿಸಿದರು.

 ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ, ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ನಂಜನಗೂಡಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಭೇಟಿ 

ಭಾರತ್ ಜೋಡೋ ಕಾರ್ಯಕ್ರಮದ ಹಿನ್ನೆಲೆ ನಂಜನಗೂಡು ಬಳಿಯ ಬದನವಾಳು ಗ್ರಾಮದಲ್ಲಿ ಗಾಂಧಿ ಜಯಂತಿ ಹಾಗೂ ಇತರ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ರಾಹುಲ್ 

Latest Videos


 ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ  ಅಲ್ಲಿ ದೇವರಿಗೆ ಬಿಲ್ವಪತ್ರೆ ಅರ್ಚನೆ ಮಾಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

 ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್,  ಹಿರಿಯ ನಾಯಕ ಸಿದ್ದರಾಮಯ್ಯ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲಾ ರಾಹುಲ್ ಗೆ ಜೊತೆಯಾದರು.

  ಭಾರತ್‌ ಜೋಡೋ ಯಾತ್ರೆಯು ಭಾನುವಾರ ಸಂಜೆ ಮೈಸೂರು ತಲುಪಿದ್ದು, ರಾಹುಲ್ ಗಾಂಧಿ ಅವರಿಗೆ ಹಲವು ನಾಯಕರು ಸಾಥ್ ನೀಡಿದ್ದಾರೆ. 

click me!