ಜನಾಶೀರ್ವಾದ ಯಾತ್ರೆ : ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ರಾಜೀವ ಚಂದ್ರಶೇಖರ್
First Published Aug 16, 2021, 12:38 PM ISTಹುಬ್ಬಳ್ಳಿ ಜನಾಶೀರ್ವಾದ ಯಾತ್ರೆಗೆ ಆಗಮಿಸಿರುವ ಕೇಂದ್ರ ಸಚಿವ ರಾಜೀವ ಚಂದ್ರಶೇಖರ್ ಅವರು ಇಲ್ಲಿನ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದರು. ಮಠದ ಗೋಶಾಲೆಯಲ್ಲಿ ಗೋಪೂಜೆ ನೆರವೇರಿಸಿದ ಸಚಿವರು, ಉಭಯ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು.
ಈ ವೇಳೆ ಮಠದ ಟ್ರಸ್ಟ್ ಕಮಿಟಿಯಿಂದ ಸಚಿವರನ್ನು ಸನ್ಮಾನಿಸಿ ಗೌರವಿಸಲಾಯಿತು. ಬಳಿಕ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿದ ಸಚಿವರು ಕೆಲವರಿಗೆ ಪಡಿತರ ವಿತರಿಸಿದರು. ಅದಾದ ಬಳಿಕ ಮಹಿಳೆಯರು ಆರತಿ ಬೆಳಗಿ ಸ್ವಾಗತ ಕೋರಿದರು. ಈ ವೇಳೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ರಂಗಾಬದ್ದಿ, ಡಿ.ಡಿ.ಮಾಳಗಿ, ಗೋಪಾಲ ಬದ್ದಿ ಸೇರಿದಂತೆ ಹಲವು ಮುಖಂಡರು ಇದ್ದರು