ಜನಾಶೀರ್ವಾದ ಯಾತ್ರೆ : ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ರಾಜೀವ ಚಂದ್ರಶೇಖರ್

First Published Aug 16, 2021, 12:38 PM IST

ಹುಬ್ಬಳ್ಳಿ ಜನಾಶೀರ್ವಾದ ಯಾತ್ರೆಗೆ ಆಗಮಿಸಿರುವ ಕೇಂದ್ರ ಸಚಿವ ರಾಜೀವ ಚಂದ್ರಶೇಖರ್ ಅವರು ಇಲ್ಲಿನ ಸಿದ್ಧಾರೂಢ  ಮಠಕ್ಕೆ ಭೇಟಿ ನೀಡಿದರು. ಮಠದ ಗೋಶಾಲೆಯಲ್ಲಿ ಗೋಪೂಜೆ ನೆರವೇರಿಸಿದ ಸಚಿವರು, ಉಭಯ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು.

ಈ ವೇಳೆ ಮಠದ ಟ್ರಸ್ಟ್ ಕಮಿಟಿಯಿಂದ ಸಚಿವರನ್ನು ಸನ್ಮಾನಿಸಿ ಗೌರವಿಸಲಾಯಿತು. ಬಳಿಕ  ನ್ಯಾಯಬೆಲೆ ಅಂಗಡಿಗೆ ಭೇಟಿ  ನೀಡಿದ ಸಚಿವರು ಕೆಲವರಿಗೆ ಪಡಿತರ ವಿತರಿಸಿದರು. ಅದಾದ ಬಳಿಕ  ಮಹಿಳೆಯರು ಆರತಿ  ಬೆಳಗಿ ಸ್ವಾಗತ ಕೋರಿದರು.  ಈ ವೇಳೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ರಂಗಾಬದ್ದಿ, ಡಿ.ಡಿ.ಮಾಳಗಿ, ಗೋಪಾಲ ಬದ್ದಿ ಸೇರಿದಂತೆ ಹಲವು ಮುಖಂಡರು ಇದ್ದರು

rajeev chandrasekhar

ಹುಬ್ಬಳ್ಳಿ ಜನಾಶೀರ್ವಾದ ಯಾತ್ರೆಗೆ ಆಗಮಿಸಿರುವ ಕೇಂದ್ರ ಸಚಿವ ರಾಜೀವ ಚಂದ್ರಶೇಖರ್ ಅವರು ಇಲ್ಲಿನ ಸಿದ್ಧಾರೂಢ  ಮಠಕ್ಕೆ ಭೇಟಿ ನೀಡಿದರು.  ಮಠದ ಗೋಶಾಲೆಯಲ್ಲಿ ಗೋಪೂಜೆ ನೆರವೇರಿಸಿದ ಸಚಿವರು, ಉಭಯ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು.

rajeev chandrasekhar

ಈ ವೇಳೆ ಮಠದ ಟ್ರಸ್ಟ್ ಕಮಿಟಿಯಿಂದ ಸಚಿವರಾದ ರಾಜೀವ್ ಚಂದ್ರಶೇಖರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ರಂಗಾಬದ್ದಿ, ಡಿ.ಡಿ.ಮಾಳಗಿ, ಗೋಪಾಲ ಬದ್ದಿ ಸೇರಿದಂತೆ ಹಲವು ಮುಖಂಡರು ಇದ್ದರು.

rajeev chandrasekhar

ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಭೇಟಿ ಮಾಡಿದ ಸಾಫ್ಟ್‌ವೇರ್ ಎಂಜಿನಿಯರ್ಸ್ ನಿಯೋಗ ಹುಬ್ಬಳ್ಳಿ ಧಾರವಾಡ ಸಾಫ್ಟ್‌ವೇರ್ ಸಂಸ್ಥೆಗಳ ಸ್ಥಾಪನೆಗೆ ಕ್ರಮ ಜರುಗಿಸುವಂತೆ ಮನವಿ ಮಾಡಿತು. 

ಬೆಂಗಳೂರು ಸೇರಿದಂತೆ ದೇಶದ ಇತರೆ ನಗರದಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. 10 ಲಕ್ಷಕ್ಕೂ ಅಧಿಕ ಇಂಜಿನಿಯರ್ ಗಳು ಬೇರೆಡೆ ಕೆಲಸ ಮಾಡುತ್ತಿದ್ದು, ಹುಬ್ಬಳ್ಳಿಯಲ್ಲೇ ಸಂಸ್ಥೆಗಳನ್ನು ಸ್ಥಾಪಿಸಿ ಎಂದು ಮನವಿಯಲ್ಲಿ ತಿಳಿಸಿದ್ದು, ಇದಕ್ಕೆ ಸಚಿವರು ಸೂಕ್ತವಾಗಿ ಸ್ಪಂದಿಸಿದರು.

rajeev chandrasekhar

ಸಿದ್ಧಾರೂಢ ಮಠದ ಗೋಶಾಲೆಯಲ್ಲಿ ಗೋಪೂಜೆ ನೆರವೇರಿಸಿದ ಸಚಿವರು ಉಭಯ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು. ಪೂಜೆ ಸಲ್ಲಿಸುವ ಮೂಲಕ ಆಶೀರ್ವಾದ ಪಡೆದರು.

rajeev chandrasekhar

ಬಳಿಕ ಹೆಗ್ಗೇರಿಯಲ್ಲಿನ ನಗರ ಆರೋಗ್ಯ ಕೇಂದ್ರದಲ್ಲಿ‌ ಲಸಿಕಾ ಕೇಂದ್ರ ಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಲಸಿಕೆ ಲಭ್ಯತೆ ಬಗ್ಗೆ ಪರಿಶೀಲಿಸಿದರು. ಈ ವೇಳೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಬಸವರಾಜ ಕುಂದಗೋಳಮಠ, ಲಕ್ಷ್ಮಣ ಕಲಾಲ ಸೇರಿದಂತೆ ಹಲವು ಮುಖಂಡರಿದ್ದರು.

rajeev chandrasekhar

ಜನಾಶೀರ್ವಾದ ಯಾತ್ರೆಗೆ ಆಗಮಿಸಿರುವ ಕೇಂದ್ರ ಸಚಿವ ರಾಜೀವ ಚಂದ್ರಶೇಖರ್ ಅವರು ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿದರು. ಕೆಲ ಫಲಾನುಭವಿಗಳಿಗೆ ಪಡಿತರವನ್ನು ವಿತರಿಸಿದರು.  

ಈ ವೇಳೆ ಸುಮಂಗಲಿಯರು ಆರತಿ ಬೆಳಗಿ ಸ್ವಾಗತಿಸಿದರು. ಶಾಲು‌ಹೊದೆಸಿ ಸನ್ಮಾನಿಸಿದರು. ಎಲ್ಲೆಡೆ ಅದ್ಧೂರಿ ಸ್ವಾಗತ ದೊರೆಯಿತು

click me!