ಮೊದಲಿಗೆ ನಗರದ ಶ್ರೀ ಚಾಮರಾಜೇಶ್ವರ ದೇವಾಲಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್, ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎ.ಆರ್. ಕೃಷ್ಣಮೂರ್ತಿ, ಎಂ.ಆರ್. ಮಂಜುನಾಥ್, ಇತರೆ ಗಣ್ಯರು ವಿಶೇಷ ಪೂಜಾ ಕೈಂಕರ್ಯ ಕಾರ್ಯ ನೆರವೇರಿಸಿ ಜಿಲ್ಲಾ ದಸರಾ ಮಹೋತ್ಸವಕ್ಕೆ ಸಾಂಪ್ರಾದಾಯಿಕವಾಗಿ ಚಾಲನೆ ನೀಡಿದರು.
ಶ್ರೀ ಚಾಮರಾಜೇಶ್ವರ ದೇವಾಲಯಕ್ಕೆ ಆಗಮಿಸಿದ ಗಣ್ಯರು ಮೊದಲು ಚಾಮರಾಜೇಶ್ವರಸ್ವಾಮಿಗೆ ಪೂಜೆ ಸಲ್ಲಿಸಿ ದೇವಾಲಯದ ಗರ್ಭಗುಡಿಯಲ್ಲಿರುವ ಉತ್ಸವಮೂರ್ತಿಯ ಜ್ಯೋತಿ ಬೆಳಗಿಸಿದರು. ಶ್ರೀ ಚಾಮುಂಡೇಶ್ವರಿ, ಶ್ರೀ ಕೆಂಪನಂಜಾಂಬ ದೇವಿ ಅಮ್ಮನವರಿಗೂ ಪೂಜಾ ಕಾರ್ಯ ನೆರವೇರಿಸಿದರು. ಬಳಿಕ ನಂದಿಧ್ವಜ ಕಂಬಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿದರು.