ಖಾಸಗಿ ಆಸ್ಪತ್ರೆ ಹಾಸಿಗೆ ಹಂಚಿಕೆ ಮತ್ತೊಮ್ಮೆ ಪರಿಶೀಲಿಸಿ: ವಿಜಯಭಾಸ್ಕರ್‌

Kannadaprabha News   | Asianet News
Published : Oct 14, 2020, 09:56 AM IST

ಬೆಂಗಳೂರು(ಅ.14): ನಗರದಲ್ಲಿ ಕೊರೋನಾ ಸೋಂಕು ಪತ್ತೆ ಸಂಖ್ಯೆ ಹೆಚ್ಚಾಗುತ್ತಿದ್ದು, ಖಾಸಗಿ ಆಸ್ಪತ್ರೆಯಲ್ಲಿ ನಿಯಮಾನುಸಾರ ಶೇಕಡ 50 ರಷ್ಟು ಹಾಸಿಗೆ ನೀಡಿರುವ ಬಗ್ಗೆ ಪರಿಶೀಲನೆ ನಡೆಸುವಂತೆ ಹಿರಿಯ ಐಎಎಸ್‌ ಹಾಗೂ ಐಪಿಎಸ್‌ ಅಧಿಕಾರಿಗಳಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌ ನಿರ್ದೇಶನ ನೀಡಿದ್ದಾರೆ.

PREV
14
ಖಾಸಗಿ ಆಸ್ಪತ್ರೆ ಹಾಸಿಗೆ ಹಂಚಿಕೆ ಮತ್ತೊಮ್ಮೆ ಪರಿಶೀಲಿಸಿ: ವಿಜಯಭಾಸ್ಕರ್‌

ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಗೆ ಸರ್ಕಾರಿ ಕೋಟಾದಡಿ ಶೇ.50ರಷ್ಟು ಹಾಸಿಗೆ ಉಸ್ತುವಾರಿಗೆ ಹಾಗೂ ನಿಗಾ ವಹಿಸುವುದಕ್ಕೆ ಸರ್ಕಾರ ನೇಮಿಸಿದ ಹಿರಿಯ ಐಎಎಸ್‌ ಹಾಗೂ ಐಪಿಎಸ್‌ ಅಧಿಕಾರಿಗಳು ಮತ್ತು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಅವರೊಂದಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ ವಿಜಯಭಾಸ್ಕರ್‌ ಸಭೆ ನಡೆಸಿದರು.

ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಗೆ ಸರ್ಕಾರಿ ಕೋಟಾದಡಿ ಶೇ.50ರಷ್ಟು ಹಾಸಿಗೆ ಉಸ್ತುವಾರಿಗೆ ಹಾಗೂ ನಿಗಾ ವಹಿಸುವುದಕ್ಕೆ ಸರ್ಕಾರ ನೇಮಿಸಿದ ಹಿರಿಯ ಐಎಎಸ್‌ ಹಾಗೂ ಐಪಿಎಸ್‌ ಅಧಿಕಾರಿಗಳು ಮತ್ತು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಅವರೊಂದಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ ವಿಜಯಭಾಸ್ಕರ್‌ ಸಭೆ ನಡೆಸಿದರು.

24

ಈ ವೇಳೆ ಖಾಸಗಿ ಆಸ್ಪತ್ರೆಯಲ್ಲಿ ಶೇ.50 ರಷ್ಟು ಹಾಸಿಗೆಯನ್ನು ಬಿಬಿಎಂಪಿ ಅಥವಾ ಸರ್ಕಾರ ಶಿಫಾರಸು ಮಾಡುವ ಸೋಂಕಿತರಿಗೆ ನೀಡಲಾಗುತ್ತಿದೆಯೇ ಹಾಗೂ ತೀವ್ರ ನಿಗಾ ಘಟಕದ ಹಾಸಿಗೆಗಳ ವ್ಯವಸ್ಥೆ, ಲಭ್ಯವಿರುವ ಹಾಸಿಗೆಗಳ ಸಂಖ್ಯೆ ಮತ್ತೊಮ್ಮೆ ಖಚಿತ ಪಡಿಸಿಕೊಳ್ಳುವಂತೆ ಸೂಚನೆ ನೀಡಿದರು.

ಈ ವೇಳೆ ಖಾಸಗಿ ಆಸ್ಪತ್ರೆಯಲ್ಲಿ ಶೇ.50 ರಷ್ಟು ಹಾಸಿಗೆಯನ್ನು ಬಿಬಿಎಂಪಿ ಅಥವಾ ಸರ್ಕಾರ ಶಿಫಾರಸು ಮಾಡುವ ಸೋಂಕಿತರಿಗೆ ನೀಡಲಾಗುತ್ತಿದೆಯೇ ಹಾಗೂ ತೀವ್ರ ನಿಗಾ ಘಟಕದ ಹಾಸಿಗೆಗಳ ವ್ಯವಸ್ಥೆ, ಲಭ್ಯವಿರುವ ಹಾಸಿಗೆಗಳ ಸಂಖ್ಯೆ ಮತ್ತೊಮ್ಮೆ ಖಚಿತ ಪಡಿಸಿಕೊಳ್ಳುವಂತೆ ಸೂಚನೆ ನೀಡಿದರು.

34

ಸರ್ಕಾರ ಶಿಫಾರಸು ಮಾಡುವ ಸೋಂಕಿತರಿಂದ ಖಾಸಗಿ ಆಸ್ಪತ್ರೆಗಳು ಯಾವುದೇ ಕಾರಣಕ್ಕೂ ಹಣ ಪಡೆಯಬಾರದು. ಇದೇ ರೀತಿ ನೇರವಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗುವ ಸೋಂಕಿತರಿಗೂ ಸರ್ಕಾರ ನಿಗದಿ ಮಾಡಿರುವ ಮೊತ್ತವೇ ಪಡೆಯಬೇಕು. ಒಂದೊಮ್ಮೆ ಈ ನಿಯಮ ಉಲ್ಲಂಘನೆಯಾಗುತ್ತಿದ್ದರೆ, ಪಾಲಿಕೆಗೆ ವರದಿ ಮಾಡಿ ಆಯುಕ್ತರು ಕ್ರಮ ಕೈಗೊಳ್ಳಲಿದ್ದಾರೆ ಎಂದು ಸೂಚಿಸಿದರು.

ಸರ್ಕಾರ ಶಿಫಾರಸು ಮಾಡುವ ಸೋಂಕಿತರಿಂದ ಖಾಸಗಿ ಆಸ್ಪತ್ರೆಗಳು ಯಾವುದೇ ಕಾರಣಕ್ಕೂ ಹಣ ಪಡೆಯಬಾರದು. ಇದೇ ರೀತಿ ನೇರವಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗುವ ಸೋಂಕಿತರಿಗೂ ಸರ್ಕಾರ ನಿಗದಿ ಮಾಡಿರುವ ಮೊತ್ತವೇ ಪಡೆಯಬೇಕು. ಒಂದೊಮ್ಮೆ ಈ ನಿಯಮ ಉಲ್ಲಂಘನೆಯಾಗುತ್ತಿದ್ದರೆ, ಪಾಲಿಕೆಗೆ ವರದಿ ಮಾಡಿ ಆಯುಕ್ತರು ಕ್ರಮ ಕೈಗೊಳ್ಳಲಿದ್ದಾರೆ ಎಂದು ಸೂಚಿಸಿದರು.

44

ಸಭೆಯಲ್ಲಿ ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ್‌ ಪ್ರಸಾದ್‌, ಬಿಬಿಎಂಪಿ (ಘನತ್ಯಾಜ್ಯ ನಿರ್ವಹಣೆಯ) ವಿಶೇಷ ಆಯುಕ್ತ ರಂದೀಪ್‌, ಖಾಸಗಿ ಆಸ್ಪತ್ರೆಗಳ ಹಾಸಿಗೆ ನಿರ್ವಹಣೆ ಕಮಿಟಿಯ ಮುಖ್ಯಸ್ಥರಾದ ತುಷಾರ್‌ ಗಿರಿನಾಥ್‌ ಹಾಗೂ ಬೆಂಗಳೂರು ಸ್ಮಾರ್ಟ್‌ ಸಿಟಿ ಲಿ. ವ್ಯವಸ್ಥಾಪಕ ನಿರ್ದೇಶಕಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

ಸಭೆಯಲ್ಲಿ ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ್‌ ಪ್ರಸಾದ್‌, ಬಿಬಿಎಂಪಿ (ಘನತ್ಯಾಜ್ಯ ನಿರ್ವಹಣೆಯ) ವಿಶೇಷ ಆಯುಕ್ತ ರಂದೀಪ್‌, ಖಾಸಗಿ ಆಸ್ಪತ್ರೆಗಳ ಹಾಸಿಗೆ ನಿರ್ವಹಣೆ ಕಮಿಟಿಯ ಮುಖ್ಯಸ್ಥರಾದ ತುಷಾರ್‌ ಗಿರಿನಾಥ್‌ ಹಾಗೂ ಬೆಂಗಳೂರು ಸ್ಮಾರ್ಟ್‌ ಸಿಟಿ ಲಿ. ವ್ಯವಸ್ಥಾಪಕ ನಿರ್ದೇಶಕಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories