ಚಿಕ್ಕಮಗಳೂರು: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಗೋ ಹತ್ಯೆ ಪ್ರಕರಣಗಳು ನಿಂತಿಲ್ಲ ಕಾಫಿನಾಡಲ್ಲಿ ಎಗ್ಗಿಲ್ಲದೆ ಗೋಹತ್ಯೆಗಳು ನಡೆಯುತ್ತಿದ್ದು, ಇದನ್ನು ಖಂಡಿಸಿ ಭಜರಂಗದಳದ ಕಾರ್ಯಕರ್ತರು ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದ್ದಾರೆ.
25
ಚೀಲದಲ್ಲಿ ಗೋವಿನ ಕಳೇಬರ ತುಂಬಿ ರಸ್ತೆಯಲ್ಲಿ ಎಸೆದು ಹೋದ ದುಷ್ಕರ್ಮಿಗಳು
ಚೀಲದಲ್ಲಿ ಗೋವಿನ ಕಳೆ ಬರಹ ತುಂಬಿ ರಸ್ತೆಯಲ್ಲಿ ಎಸೆದ ಹೋಗಿದ್ದರಿಂದ ಆಕ್ರೋಶಗೊಂಡ ಭಜರಂಗದಳ ಕಾರ್ಯಕರ್ತರು ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾ ನಿರತ ಕಾರ್ಯಕರ್ತರ ವಿರುದ್ಧ ಈಗ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
35
ಭಜರಂಗದಳ ಕಾರ್ಯಕರ್ತ ಪ್ರತಿಭಟನೆ
ಕೊಪ್ಪದಿಂದ ತೀರ್ಥಹಳ್ಳಿಗೆ ಹೋಗುವ ಮಾರ್ಗದ ಶಿವಪುರದ ರಸ್ತೆ ಬಳಿ ರಸ್ತೆಯಲ್ಲಿ ನಾಲ್ಕು ಚೀಲದಲ್ಲಿ ಗೋವುಗಳ ಕಳೆಬರ ಎಸೆದು ಹೋಗಿದ್ದು, ಗೋವಿನ ಕಳೆಬರಹ ಪತ್ತೆಯಾದ ಹಿನ್ನೆಲೆ ಭಜರಂಗದಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ತಡೆದ ಕಾರ್ಯಕರ್ತರ ವಿರುದ್ಧ ಎಫ್ಐಆರ್
ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಗೋಹತ್ಯೆ ನಡೆಸಿದವರನ್ನು ಬಂಧಿಸುವಂತೆ ಆಗ್ರಹಿಸಿದರು. ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟಿಸಿದ ಹಿನ್ನೆಲೆ ಪೊಲೀಸರು ಭಜರಂಗದಳ ಕಾರ್ಯಕರ್ತರ ಮೇಲೆ ಎಫ್.ಐ.ಆರ್ ದಾಖಲಿಸಿದ್ದಾರೆ. ವಿನಯ್ ಶಿವಪುರ ಸೇರಿ ಇನ್ನಿತರರ ಮೇಲೆ ಚಿಕ್ಕಮಗಳೂರಿನ ಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿರಗುಪ್ಪದಲ್ಲಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ
ಮತ್ತೊಂದೆಡೆ ಅಕ್ರಮವಾಗಿ ಕೇರಳದ ಕಸಾಯಿಖಾನೆಗೆ ಸಾಗಿಸುತ್ತಿದ್ದ 29 ಜಾನುವಾರುಗಳನ್ನು ರಕ್ಷಿಸಿದ ಘಟನೆ ಬಳ್ಳಾರಿ ಜಿಲ್ಲೆ ಸಿರಗುಪ್ಪ ಪಟ್ಟಣದಲ್ಲಿ ನಡೆದಿದ್ದು, ಇಬ್ಬರು ಸಾಗಣೆದಾರರನ್ನು ಬಂಧಿಸಲಾಗಿದೆ. ಈ ಗೋವುಗಳನ್ನು ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಿಂದ ಸಿರಗುಪ್ಪ ಮಾರ್ಗವಾಗಿ ಕಾಸರಗೋಡಿಗೆ ಸಾಗಿಸಲಾಗುತ್ತಿತ್ತು. ಮಾಹಿತಿ ಅಧಾರಿಸಿ ಕೆಲ ಗೋರಕ್ಷಕರು ವಾಹನ ತಡೆದು ಪರಿಶೀಲನೆ ಮಾಡಿದಾಗ ಅಕ್ರಮ ಸಾಗಾಟದ ಬಗ್ಗೆ ಗೊತ್ತಾಗಿದೆ. ನಂತರ ಸಿರಗುಪ್ಪ ಪೊಲೀಸರು ಸ್ಥಳಕ್ಕೆ ಆಗಮಿಸಿ ಲಾರಿಯಲ್ಲಿದ್ದ 28 ಎತ್ತು ಒಂದು ಕೋಣ ಹಾಗೂ ಸಾಗಣೆಗೆ ಬಳಸಿದ ಕಂಟೇನರ್ ಅನ್ನು ವಶಕ್ಕೆ ಪಡೆದಿದ್ದಾರೆ. ಕಂಟೇನರ್ ಚಾಲಕ ಹುಸೇನ್ ಮತ್ತು ಸಹಾಯಕ ಸೌತಾಲಿಖಾನ್ ಅವರನ್ನು ಬಂಧಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ