ಚಿಕ್ಕಮಗಳೂರು: ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಯ್ತು ಕಾಡಾನೆಗಳ ಅಪರೂಪದ ದೃಶ್ಯ

Published : Mar 19, 2026, 11:38 AM IST

ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನಲ್ಲಿ ಕಾಡಾನೆಗಳ ಹಾವಳಿ ತೀವ್ರಗೊಂಡಿದ್ದು, ಬೆಳೆ ನಾಶವಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಇದರ ನಡುವೆಯೇ, ಆನೆಗಳು ತಮ್ಮ ಮರಿಗಳನ್ನು ಕಾಳಜಿಯಿಂದ ನೋಡಿಕೊಳ್ಳುತ್ತಿರುವ ಅಪರೂಪದ ದೃಶ್ಯ ಡ್ರೋನ್‌ನಲ್ಲಿ ಸೆರೆಯಾಗಿದೆ.

PREV
16

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕೆಲ ದಿನಗಳಿಂದ ಕಾಡಾನೆಗಳ ಹಾವಳಿ ಜೋರಾಗಿದ್ದು, ಜನ ಮನೆಯಿಂದ ಹೊರಬಂದು ರಸ್ತೆ ನಡೆಯುವುದಕ್ಕೆ ಭಯ ಪಡುತ್ತಿದ್ದಾರೆ. ಹಲವು ಕಡೆಗಳಲ್ಲಿ ಕಾಡಾನೆಗಳು ದಾಂಧಲೆ ನಡೆಸುತ್ತಿರು ಘಟನೆಗಳು ವರದಿಯಾಗಿವೆ. ಇದರ ನಡುವೆ ಈಗ ಅಪರೂಪದ ದೃಶ್ಯವೊಂದು ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ದಾವಣಗೆರೆ ಉಪ ಚುನಾವಣೆ: ಬಿಜೆಪಿ ಟಿಕೆಟ್ ಪಡೆದ ಶ್ರೀನಿವಾಸ್ ದಾಸಕರಿಯಪ್ಪ ಹೇಳಿದ್ದೇನು?

26

ಹೌದು ಆನೆಗಳು ತಮ್ಮ ಮರಿಗಳನ್ನು ಬಹಳ ಕಾಳಜಿಯಿಂದ ಕರೆದುಕೊಂಡು ಜೊತೆಯಾಗಿ ಸಾಗುತ್ತಿರುವ ದೃಶ್ಯ ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೂಡಿಗೆರೆ ತಾಲೂಕಿನ ಜಿ.ಹೊಸಳ್ಳಿ-ಕಸ್ಕೆಬೈಲು ಗ್ರಾಮದಲ್ಲಿ ಆನೆಗಳು ಮರಿಗಳ ಜೊತೆ ಬಹಳ ಜಾಗರೂಕತೆಯಿಂದ ಸಂಚರಿಸುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೈರಲ್ ಆಗಿದೆ. ಅನೇಕರು ತಮ್ಮ ಮರಿಗಳ ಬಗ್ಗೆ ಬಹಳ ಕಾಳಜಿಯಿಂದ ಇರುತ್ತವೆ. ತಮ್ಮ ಮರಿಗಳ ಸುರಕ್ಷತೆ ಅವುಗಳ ಪ್ರಮುಖ ಆದ್ಯತೆಯಾಗಿದ್ದು, ಅದನ್ನು ಡ್ರೋನ್ ಕ್ಯಾಮರಾದಲ್ಲಿ ಸೆರೆಯಾದ ವೀಡಿಯೋದಲ್ಲಿ ಕಾಣಬಹುದಾಗಿದೆ.

ಇದನ್ನೂ ಓದಿ: ಅಣ್ಣಾಮಲೈ ಹುಲಿ ಅಭಯಾರಣ್ಯದ ತಪ್ಪಲಲ್ಲಿ ಕಂಡು ಬಂದ ಹಕ್ಕಿಗಳ ಹರಟೆಯ ಅದ್ಭುತ ದೃಶ್ಯ

36

ಇತ್ತ ಚಿಕ್ಕಮಗಳೂರಿನ ಹಲವು ಭಾಗಗಳಲ್ಲಿ ಕಾಡಾನೆ ಹಾವಳಿ ಜೋರಾಗಿದ್ದು, ಒಂದೆರಡು ವರ್ಷದ ಅಡಿಕೆ ತೋಟದಲ್ಲಿ ಕಾಡಾನೆಗಳ ಸಂಚಾರದಿಂದ ಅಡಿಕೆ ಗಿಡಗಳು ಧ್ವಂಸಗೊಂಡಿವೆ. ಕಾಡಾನೆಗಳ ನಿರಂತರ ಹಾವಳಿಯಿಂದ ಗ್ರಾಮಸ್ಥರು ಕಂಗೆಟ್ಟಿದ್ದು, ತೋಟಗಳಲ್ಲಿ ಕೂಲಿ ಕೆಲಸಕ್ಕೂ ಹೋಗುವುದಕ್ಕೆ ಭಯಪಟ್ಟು ಮನೆಯಲ್ಲಿ ಕಳೆಯುವಂತಾಗಿದೆ.

ಇದನ್ನೂ ಓದಿ: ಇವರು ನೀರಲ್ಲಿ ಬಿದ್ದು ಸತ್ತ ಪ್ರೇಮಿಗಳಲ್ಲ: ಇದು ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಭಾರಿ ವೈರಲ್

46

ಕೂಡಲೇ ಆನೆ ಹಾವಳಿಗೆ ಶಾಶ್ವತ ಬ್ರೇಕ್ ಹಾಕುವಂತೆ ಜನರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ. ನಿನ್ನೆಯಷ್ಟೇ ಮೂಡಿಗೆರೆಯಲ್ಲಿ 70ಕ್ಕೂ ಹೆಚ್ಚು ಕಾಡಾನೆಗಳು ಬೀಡು ಬಿಟ್ಟಿದ್ದವು. ಸ್ಥಳೀಯವಾಗಿ ಬೀಟಮ್ಮ, ಭೀಮ ಎಂಬ ಹೆಸರಿನ ಗುಂಪಿನ ಕಾಡಾನೆಗಳು ಕಾಫಿ ತೋಟ, ಭತ್ತದ ಗದ್ದೆಗಳಿಗೆ ನುಗ್ಗಿ ಹಾನಿ ಮಾಡಿದ್ದವು. ಇವುಗಳ ಹಾವಳಿಯಿಂದ ರೈತರು ಕೃಷಿ ಜಮೀನಿನಲ್ಲಿ ಓಡಾಡುವುದಕ್ಕೆ ಭಯಪಡುವಂತಾಗಿದೆ.

ಇದನ್ನೂ ಓದಿ: ಭಾರತದಲ್ಲಿ ನಕ್ಸಲರು ಹಾಗೂ ದಂಗೆಕೋರ ಗುಂಪುಗಳಿಗೆ ತರಬೇತಿ : ಅಮೆರಿಕನ್ ಪ್ರಜೆಯೂ ಸೇರಿ 7 ವಿದೇಶಿಗರ ಬಂಧನ

56

ಒಂದೇ ತಾಲೂಕಿನಲ್ಲಿ ಹಲವು ಗುಂಪುಗಳಾಗಿ ಕಾಡಾನೆಗಳು ಸಂಚರಿಸುತ್ತಿದ್ದು, ಕಸ್ಕೆಬೈಲು, ಜಿ.ಹೊಸಳ್ಳಿ ಸೇರಿ ಅನೇಕ ಗ್ರಾಮಗಳಲ್ಲಿ ಕಾಡಾನೆಗಳು ಕೃಷಿಕರಿಗೆ ತೊಂದರೆ ಮಾಡಿದ್ದು, ಕಾಡಾನೆಗಳ ಹಾವಳಿಯಿಂದ ವಿದ್ಯಾರ್ಥಿಗಳು ಪರೀಕ್ಷೆಗ ಹೋಗುವುದಕ್ಕೂ ಭಯಪಡುವಂತಾಗಿದೆ. ಕಾಡಾನೆಗಳ ಹಾವಳಿಯಿಂದ ಕೃಷಿ ಕಾರ್ಮಿಕರಿಗೆ ಕೆಲಸ ಇಲ್ಲದಂತಾಗಿದ್ದು, ಕಾಡಾನೆ ದಾಳಿಯಿಂದ ಈಗಾಗಲೇ ಹಲವು ಸಾವು ನೋವುಗಳು ಸಂಭವಿಸಿವೆ.

ಇದನ್ನೂ ಓದಿ: ಯುದ್ಧದ ನಡುವೆಯೇ ಇರಾನ್‌ನಿಂದ ಮಿಲಿಯನ್‌ಗಟ್ಟಲೇ ಬ್ಯಾರೆಲ್ ತೈಲ ರಫ್ತು: ಹರ್ಮುಜ್ ದಾಟಿ ಹೊರಟ 90 ಹಡಗುಗಳು

66

ಅರಣ್ಯ ಇಲಾಖೆ, ಎಲಿಫೆಂಟ್ ಟಾಸ್ಕ್ ಫೋರ್ಸ್ ಕಾರ್ಯಾಚರಣೆ ಆನೆಗಳನ್ನು ನಾಡಿನಿಂದ ದೂರ ಅಟ್ಟುವುದಕ್ಕೆ ಪ್ರಯತ್ನ ಮಾಡುತ್ತಿದ್ದು, ಆನೆಗಳ ಹಾವಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಸ್ಕೆಬೈಲು, ಜಿ ಹೊಸಳ್ಳಿ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮಾರುಕಟ್ಟೆಯಲ್ಲಿ ಮಾರಾಟಕ್ಕಿಟ್ಟ ಮೀನಿಗೆ ಜಿರಳೆ ಔಷಧಿ ಹಿಟ್ ಸ್ಪ್ರೇ ಮಾಡಿದ ಯುವಕ

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories