ಗುಡುಗು, ಸಿಡಿಲು, ಬಿರುಗಾಳಿಯೊಂದಿಗೆ ಒಂದು ಗಂಟೆಗೂ ಹೆಚ್ಚು ಸಮಯ ಬಿರುಸಾಗಿ ಸುರಿದ ಆಲಿಕಲ್ಲು ಮಳೆಯಿಂದಾಗಿ ನಗರದ ಹಲವು ಪ್ರದೇಶಗಳು ಜಲಾವೃತಗೊಂಡವು, ಹಲವಾರು ತಿಂಗಳಿಂದ ಕಳಸ, ಕೊಳಕು, ತ್ಯಾಜ್ಯಗಳಿಂದ ತುಂಬಿಕೊಂಡಿದ್ದ ರಾಜಕಾಲುವೆ, ಚರಂಡಿಗಳೆಲ್ಲವೂ ತುಂಬಿ ಹರಿದು ನೀರು ತಗ್ಗು ಪ್ರದೇಶಗಳಿಗೆ ನುಗ್ಗಿದೆ.ಮಾರ್ಕೆಟ್ ರಸ್ತೆ, ಮಲ್ಲಂದೂರು ರಸ್ತೆ ಸೇರಿದಂತೆ ಹಲವೆಡೆ ನೀರು ರಸ್ತೆ ಮೇಲೆ ನದಿಯಂತೆ ಹರಿದಿದೆ. ಕೆಲವು ಕಡೆಗಗಳಲ್ಲಿ ಮಳೆನೀರಿನ ರಭಸಕ್ಕೆ ಒಳಚರಂಡಿಗಳು ಉಕ್ಕಿ ಹರಿದು ರಸ್ತೆಯೆಲ್ಲಾ ತುಂಬಿಕೊಂಡಿದ್ದು ಕಂಡು ಬಂತು.