ಚಿತ್ರದುರ್ಗದಲ್ಲಿ ನಡೆದ ಹಿಂದೂ ಮಹಾಗಣಪತಿ ಉತ್ಸವದಲ್ಲಿ ಭಕ್ತರಿಂದ ಕಾಣಿಕೆ ಪೆಟ್ಟಿಗೆಯಲ್ಲಿ 15 ಲಕ್ಷ ರೂ. ಸಂಗ್ರಹ!

Published : Sep 15, 2025, 11:04 AM IST

ಚಿತ್ರದುರ್ಗದಲ್ಲಿ ನಡೆದ ಹಿಂದೂ ಮಹಾಗಣಪತಿ ಉತ್ಸವದಲ್ಲಿ ಭಕ್ತರಿಂದ ಕಾಪಿಕೆ ಪೆಟ್ಟಿಗೆಯಲ್ಲಿ 15 ಲಕ್ಷ ರೂ. ಸಂಗ್ರಹವಾಗಿದೆ.

PREV
14
ಚಿತ್ರದುರ್ಗ ಹಿಂದೂ ಮಹಾಗಣಪತಿ

ವಿಶ್ವ ಹಿಂದೂ ಪರಿಷದ್ ಮತ್ತು ಭಜರಂಗದಳದ ಆಶ್ರಯದಲ್ಲಿ ಚಿತ್ರದುರ್ಗ ನಗರದಲ್ಲಿ ನಡೆದ 18 ದಿನಗಳ ಕಾಲದ ಹಿಂದೂ ಮಹಾಗಣಪತಿ ಉತ್ಸವದಲ್ಲಿ ಸಂಗ್ರಹವಾದ ಕಾಣಿಕೆ ಪೆಟ್ಟಿಗೆಯ ಹಣವನ್ನು ಎಣಿಕೆ ಮಾಡಲಾಗಿದೆ.

24
ದೇಣಿಗೆ ಎಣಿಕೆ

ಹಿಂದೂ ಮಹಾಗಣಪತಿ ಸಮಿತಿಯಿಂದ ನಡೆದ ಈ ಎಣಿಕೆಯಲ್ಲಿ ಕಾಣಿಕೆ ಪೆಟ್ಟಿಗೆಯಲ್ಲಿ ಒಟ್ಟು 15 ಲಕ್ಷ ರೂಪಾಯಿ ಸಂಗ್ರಹವಾಗಿದ್ದು, ಇದರಲ್ಲಿ 12.50 ಲಕ್ಷ ರೂ. ನೋಟುಗಳ ರೂಪದಲ್ಲಿದ್ದರೆ, 2.50 ಲಕ್ಷ ರೂ. ಚಿಲ್ಲರೆ ಹಣ ಸಂಗ್ರಹವಾಗಿದೆ.

34
ಪೆಟ್ಟಿಗೆ ಹಣ ಹರಾಜು

ಪ್ರತಿ ವರ್ಷದಂತೆ ಈ ಬಾರಿಯೂ ಕಾಣಿಕೆ ಪೆಟ್ಟಿಗೆಯ ಹಣವನ್ನು ಸಾಂಪ್ರದಾಯಿಕ ಹರಾಜಿನ ಮೂಲಕ ಭಕ್ತರು ಕೂಗಿ ಪಡೆಯಲಿದ್ದಾರೆ. 18 ದಿನಗಳ ಕಾಲ ನಡೆದ ಮಹಾಗಣಪತಿ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದ್ದವು.

44
ಭಕ್ತರ ಸಹಾಕರ

ಸೆಪ್ಟೆಂಬರ್ 13ರಂದು ನಡೆದ ಶೋಭಾಯಾತ್ರೆಯಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸಿದ್ದರು.ಈ ಉತ್ಸವದ ಯಶಸ್ವಿಯಾದ ಆಯೋಜನೆಗೆ ಸಮಿತಿಯ ಸದಸ್ಯರು ಹಾಗೂ ಭಕ್ತಾದಿಗಳ ಸಹಕಾರವೇ ಕಾರಣ ಎಂದು ಆಯೋಜಕರು ತಿಳಿಸಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories