ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಬೊಮ್ಮಾಯಿ, ಬಿಎಸ್‌ವೈ

Published : Aug 19, 2022, 11:41 AM IST

ತಿರುಪತಿ(ಆ.19):  ತಮ್ಮನ್ನು ರಾಷ್ಟ್ರೀಯ ಬಿಜೆಪಿ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸದಸ್ಯರನ್ನಾಗಿ ನೇಮಿಸಿದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಇಂದು(ಶುಕ್ರವಾರ) ಸಿಎಂ ಬಸವರಾಜ ಬೊಮ್ಮಾಯಿ ಜತೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. 

PREV
14
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಬೊಮ್ಮಾಯಿ, ಬಿಎಸ್‌ವೈ

ತಿಮ್ಮಪ್ಪನ ದರ್ಶನ ಪಡೆದ ಬಳಿಕ ಸಿಎಂ ಹಾಗೂ ಮಾಜಿ ಸಿಎಂ ಬಿಎಸ್‌ವೈ ತಿರುಮಲದಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ರಾಜ್ಯದ ನೂತನ ವಸತಿ ಗೃಹ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿ ಪರಿಶೀಲನೆ ನಡೆಸಿದ್ದಾರೆ. 

24

ತ್ವರಿತಗತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಿ, ಜನರಿಗೆ ಈ ಕಟ್ಟಡ ಬಳಕೆಗೆ ಅನುಕೂಲ ಮಾಡಿಕೊಡುವಂತೆ  ಅಧಿಕಾರಿಗಳಿಗೆ ಸೂಚನೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್. ಅಶೋಕ್, ಬಿಡಿಎ ಅಧ್ಯಕ್ಷ ಎಸ್. ಆರ್. ವಿಶ್ವನಾಥ್ ಮತ್ತು ಇತರರು ಉಪಸ್ಥಿತರಿದ್ದರು. 

34

ನಿನ್ನೆ ಸಂಜೆ ವಿಶೇಷ ವಿಮಾನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್‌.ಅಶೋಕ್‌, ತಿರುಪತಿ ತಿರುಮಲ ದೇವಸ್ಥಾನದ ಸದಸ್ಯರೂ ಆಗಿರುವ ಶಾಸಕ ಎಸ್‌.ಆರ್‌.ವಿಶ್ವನಾಥ್‌ ಅವರೊಂದಿಗೆ ತಿರುಪತಿಗೆ ತೆರಳಿ ವಾಸ್ತವ್ಯ ಹೂಡಿದ್ದರು.

44

ಈ ವೇಳೆ ಸಿಎಂ ಬೊಮ್ಮಾಯಿ ಹಾಗೂ ಬಿಎಸ್‌ವೈ ಟಿಟಿಡಿ ಅಧ್ಯಕ್ಷ ಸುಬ್ಬಾರೆಡ್ಡಿ ಅವರನ್ನು ಭೇಟಿ ಮಾಡಿ ಸೌಹಾರ್ದಯುತ ಮಾತುಕತೆ ನಡೆಸಿದ್ದರು. ಇಂದು ತಿಮ್ಮಪ್ಪನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಳಿಕ ಬೆಂಗಳೂರಿಗೆ ವಾಪಸ್‌ ಆಗಲಿದ್ದಾರೆ. 

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories