ವಿಧಾನಸೌಧ ಮುಂಭಾಗ ವಿಶೇಷವಾದ ಕೋಟಿ ಕಂಠ ಗೀತ ಗಾಯನ
First Published Oct 28, 2022, 4:11 PM ISTಬೆಂಗಳೂರು (ಅ.28): ರಾಜ್ಯ ಸರ್ಕಾರದಿಂದ ಶುಕ್ರವಾರ ರಾಜ್ಯಾದ್ಯಂತ ಹಮ್ಮಿಕೊಂಡಿರುವ ‘ಕೋಟಿ ಕಂಠ ಗೀತ ಗಾಯನ’ ಕಾರ್ಯಕ್ರಮದ ಅಂಗವಾಗಿ ವಿಧಾನಸೌಧ ಮುಂಭಾಗ ಕರ್ನಾಟಕ ರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸುವ ಸಲುವಾಗಿ ಅ.28ರಂದು ಶುಕ್ರವಾರ ರಾಜ್ಯಾದ್ಯಂತ ಗೀತ ಗಾಯನ ಕಾರ್ಯಕ್ರಮ ನಡೆದಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ, ಸಚಿವ ಸುನೀಲ್ ಕುಮಾರ್ ಅವರು ಭಾಗವಹಿಸಿದರು. ಕನ್ನಡ ನಾಡು, ನುಡಿಯ ಶ್ರೇಷ್ಠತೆಯನ್ನು ಸಾರುವ ‘ನನ್ನ ನಾಡು-ನನ್ನ ಹಾಡು’ ಸಮೂಹ ಗೀತ ಗಾಯನ, ನಾಡಗೀತೆ, ಹುಯಿಲಗೋಳ ನಾರಾಯಣರಾಯರ ‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’, ರಾಷ್ಟ್ರಕವಿ ಕುವೆಂಪು ಅವರ ‘ಬಾರಿಸು ಕನ್ನಡ ಡಿಂಡಿಮವ’, ಡಾ.ಡಿ.ಎಸ್. ಕರ್ಕಿಯವರ ‘ಹಚ್ಚೇವು ಕನ್ನಡದ ದೀಪ’, ನಾಡೋಜ ಡಾ. ಚೆನ್ನವೀರ ಕಣವಿಯವರ ‘ವಿಶ್ವ ವಿನೂತನ ವಿದ್ಯಾಚೇತನ’ ಹಾಗೂ ಡಾ. ಹಂಸಲೇಖ ಅವರ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಈ ಗೀತೆಗಳನ್ನು ಕೋಟಿ ಕಂಠದಲ್ಲಿ ಹಾಡಲಾಗಿದೆ.