ಗಾಂಧಿ ಜಯಂತಿ ಅಂಗವಾಗಿ ಬಿಜೆಪಿ ನಾಯಕರು ಖಾದಿ ವಸ್ತ್ರ ಅಭಿಯಾನ ನಡೆಸಿದರು. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ, ವಿಜಯೇಂದ್ರ, ಎಂಟಿಬಿ ನಾಗರಾಜ್ ವಸ್ತ್ರ ಖರೀದಿಸಿದರು. ಇನ್ನು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಂಗಳೂರಿನಲ್ಲಿ ಬಟ್ಟೆ ಖರೀದಿಸಿದರು. ಬೀದರ್ನಲ್ಲಿ ಸಚಿವ ಪ್ರಭು ಚವ್ಹಾಣ್, ಖಾದಿ ಭಂಡಾರಕ್ಕೆ ತೆರಳಿ ತಮಗಿಷ್ಟವಾದ ಬಟ್ಟೆಗಳನ್ನು ಖರೀದಿ ಮಾಡಿದರು. ಅಲ್ಲದೇ ತಮ್ಮ ಜೊತೆಗಿದ್ದ ಕಾರ್ಯಕರ್ತರು, ಅಭಿಮಾನಿಗಳಿಗೂ ತಲಾ ಒಂದು ಶರ್ಟ್ ಮತ್ತು ಕರವಸ್ತ್ರವನ್ನು ಖರೀದಿಸಿ ನೀಡಿದರು. ಇನ್ನು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಜಗದೀಶ ಶೆಟ್ಟರ್, ಶಂಕರ ಪಾಟೀಲ ಮುನೇನಕೊಪ್ಪ, ಹೊಸಪೇಟೆಯಲ್ಲಿ ಸಚಿವರಾದ ಆನಂದ ಸಿಂಗ್, ಬಳ್ಳಾರಿಯಲ್ಲಿ ಶ್ರೀರಾಮುಲು, ಶಂಕರಪಾಟೀಲ, ಕೊಪ್ಪಳದಲ್ಲಿ ಸಂಸದ ಕರಡಿ ಸಂಗಣ್ಣ, ಗಂಗಾವತಿಯಲ್ಲಿ ಶಾಸಕ ಪರಣ್ಣ ಮುನವಳ್ಳಿ ಖಾದಿ ಬಟ್ಟೆಗಳನ್ನು ಖರೀದಿಸಿ ಅಭಿಯಾನವನ್ನು ಬೆಂಬಲಿಸಿದರು.