ಕೆಸರು ಗದ್ದೆಯಲ್ಲಿ ಓಡಿದ ಕಂಬಳ ವೀರ ವಿಧಾನಸೌಧದಲ್ಲಿ ಮಿಂಚಿಂಗ್
First Published Feb 17, 2020, 6:25 PM ISTಜಮೈಕಾದ ಉಸೇನ್ ಬೋಲ್ಟ್ಗಿಂತಲೂ ವೇಗವಾಗಿ ಓಡಿ ಅಚ್ಚರಿ ಮೂಡಿಸಿರುವ ಮೂಡುಬಿದಿರೆ ಸಮೀಪದ ಮೀಜಾರಿನ ಕಂಬಳ ಓಟಗಾರ ಶ್ರೀನಿವಾಸ ಗೌಡ ದಿನ ಕಳೆದ ಬೆಳಕಾಗುವಷ್ಟರಲ್ಲಿ ಹೀರೋ ಆಗಿದ್ದಾರೆ. ಮಿಂಚಿನ ಓಟದಿಂದಲೇ ವಿಶ್ವದ ಗಮನವನ್ನು ತನ್ನತ್ತ ಸೆಳೆದಿರುವ ಕರುನಾಡಿನ ಬೋಲ್ಟ್, ಸಾಧನೆಗೆ ಕೇಂದ್ರ, ರಾಜ್ಯ ಸರ್ಕಾರ ಮೆಚ್ಚುಗೆ ವ್ಯಕ್ತಪಡಿಸಿದ್ದು, ಇಂದು [ಸೋಮವಾರ] ವಿಧಾನಸೌಧದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಶ್ರೀನಿವಾಸ ಗೌಡ ಅವರಿಗೆ ಸನ್ಮಾನ ಮಾಡಿದರು.