ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಜನರು ಶಾಂತಿಯುತವಾಗಿ ಜೀವನ ನಡೆಸಲು ಪೊಲೀಸರು ಕಾರಣಿಭೂತರಾಗಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ, ಅಪರಾಧ ತಡೆಯುವಲ್ಲಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಪೊಲೀಸ್ ಗೃಹ ಯೋಜನೆಯಲ್ಲಿ ಪೊಲೀಸರಿಗೆ 11 ಸಾವಿರ ಸುಸಜ್ಜಿತ ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ನಿರ್ಭಯಾ ಯೋಜನೆಯನ್ನು 662 ಕೋಟಿ ರು. ವೆಚ್ಚದಲ್ಲಿ ಜಾರಿಗೊಳಿಸಲಾಗುತ್ತಿದ್ದು, ಈ ಯೋಜನೆಯಿಂದ ಮಹಿಳೆಯರಿಗೆ, ಮಕ್ಕಳಿಗೆ ಸುರಕ್ಷತೆ ಒದಗಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಆಗಮಿಸಿ ತುರ್ತು ಸ್ಪಂದನೆ ನೀಡುವ 150 ವಾಹನಗಳಿಗೆ ಚಾಲನೆ ಕೊಟ್ಟಿದ್ದಾರೆ. 112 ಸಂಖ್ಯೆಯ ಸಹಾಯವಾಣಿಗಳನ್ನು ತೆರೆದಿದ್ದೇವೆ. ಮಹಿಳೆಯರ ಸುರಕ್ಷತೆ, ನಾಗರಿಕರ ನೆಮ್ಮದಿ, ಕಾನೂನು ಸುವ್ಯವಸ್ಥೆ ಕಾಪಾಡುವುದು ಪೊಲೀಸರ ಮೊದಲ ಕರ್ತವ್ಯ ಎಂದರು.
ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಜನರು ಶಾಂತಿಯುತವಾಗಿ ಜೀವನ ನಡೆಸಲು ಪೊಲೀಸರು ಕಾರಣಿಭೂತರಾಗಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ, ಅಪರಾಧ ತಡೆಯುವಲ್ಲಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಪೊಲೀಸ್ ಗೃಹ ಯೋಜನೆಯಲ್ಲಿ ಪೊಲೀಸರಿಗೆ 11 ಸಾವಿರ ಸುಸಜ್ಜಿತ ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ನಿರ್ಭಯಾ ಯೋಜನೆಯನ್ನು 662 ಕೋಟಿ ರು. ವೆಚ್ಚದಲ್ಲಿ ಜಾರಿಗೊಳಿಸಲಾಗುತ್ತಿದ್ದು, ಈ ಯೋಜನೆಯಿಂದ ಮಹಿಳೆಯರಿಗೆ, ಮಕ್ಕಳಿಗೆ ಸುರಕ್ಷತೆ ಒದಗಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಆಗಮಿಸಿ ತುರ್ತು ಸ್ಪಂದನೆ ನೀಡುವ 150 ವಾಹನಗಳಿಗೆ ಚಾಲನೆ ಕೊಟ್ಟಿದ್ದಾರೆ. 112 ಸಂಖ್ಯೆಯ ಸಹಾಯವಾಣಿಗಳನ್ನು ತೆರೆದಿದ್ದೇವೆ. ಮಹಿಳೆಯರ ಸುರಕ್ಷತೆ, ನಾಗರಿಕರ ನೆಮ್ಮದಿ, ಕಾನೂನು ಸುವ್ಯವಸ್ಥೆ ಕಾಪಾಡುವುದು ಪೊಲೀಸರ ಮೊದಲ ಕರ್ತವ್ಯ ಎಂದರು.