ಸಿಎಂ ತವರಲ್ಲೇ ಇನ್ನೂ ಜೀವಂತ ಬಹಿಷ್ಕಾರ ಪದ್ದತಿ, ವಿದ್ಯುತ್‌ ಕಂಬ ಮುಟ್ಟಿದ್ದಕ್ಕೆ ಹಲ್ಲೆ!

Published : Feb 05, 2026, 12:24 PM ISTUpdated : Feb 05, 2026, 12:30 PM IST

ಸಿಎಂ ತವರು ಕ್ಷೇತ್ರದಲ್ಲಿ ಅನಿಷ್ಟ ಸಾಮಾಜಿಕ ಬಹಿಷ್ಕಾರ ಪದ್ಧತಿ ಜೀವಂತವಿದೆ ಅಂತರ್ಜಾತಿ ವಿವಾಹವಾಗಿದ್ದಕ್ಕೆ ಸಾಮಾಜಿಕ ಬಹಿಷ್ಕಾರಕ್ಕೊಳಗಿದ್ದ ದಂಪತಿ, ಇದೀಗ ಎಲೆಕ್ಟ್ರಿಕ್ ಕಂಬ ಮುಟ್ಟಿದ್ದಕ್ಕೆ ಹಲ್ಲೆಗೊಳಗಾದ ಘಟನೆ ನಡೆದಿದೆ.

PREV
15
ಸಿಎಂ ತವರಲ್ಲೇ ಇನ್ನೂ ಜೀವಂತ ಬಹಿಷ್ಕಾರ ಪದ್ದತಿ, ವಿದ್ಯುತ್‌ ಕಂಬ ಮುಟ್ಟಿದ್ದಕ್ಕೆ ಹಲ್ಲೆ!

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕೊತ್ತೆಗಾಲ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಗ್ರಾಮದ ನಿವಾಸಿಗಳಾದ ವಸಂತ ಹಾಗೂ ನಟನಾಯಕ ದಂಪತಿ ಪುತ್ರಿ ಅಂತರ್ಜಾತಿ ಯುವಕನನ್ನ ಪ್ರೀತಿಸಿ ಮದುವೆಯಾಗಿದ್ದರು. ಈ ಸಂಬಂಧ ಗ್ರಾಮದ ಕೆಲವರು ವಸಂತ ನಾಯಕ ಅವರ ಕುಟುಂಬ ಸೇರಿದಂತೆ ಅವರ ಸಂಬಂಧಿಕರಿಗೆ ಕಳೆದ ತಿಂಗಳು ಸಾಮಾಜಿಕ ಬಹಿಷ್ಕಾರ ಹಾಕಿದ್ದರು. ಈ ಬಹಿಷ್ಕಾರಕ್ಕೆ ಒಳಗಾದವರಲ್ಲಿ ಎಲೆಕ್ಟ್ರಿಷಿಯನ್ ವೆಂಕಟೇಶ್ ನಾಯಕ್ ಕೂಡ ಒಬ್ಬರಾಗಿದ್ದಾರೆ.

25
ವಿದ್ಯುತ್ ಕಂಬ ಮುಟ್ಟಿದ್ದಕ್ಕೆ ಹಲ್ಲೆಗೆ ಯತ್ನ

ಇಂದು ಗ್ರಾಮದಲ್ಲಿ ವಿದ್ಯುತ್ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ರಿಪೇರಿ ಮಾಡಿಕೊಡುವಂತೆ ಕರೆ ಬಂದಿತ್ತು. ವೃತ್ತಿಯಿಂದ ಎಲೆಕ್ಟ್ರಿಷಿಯನ್ ಆಗಿರುವ ವೆಂಕಟೇಶ್ ನಾಯಕ್ ಅವರು ವಿದ್ಯುತ್ ಕಂಬವನ್ನು ಪರಿಶೀಲಿಸಲು ಮುಂದಾಗಿದ್ದಾರೆ. ಈ ವೇಳೆ ಬಹಿಷ್ಕಾರಕ್ಕೆ ಒಳಗಾದವರು ಕಂಬವನ್ನು ಮುಟ್ಟುವಂತಿಲ್ಲ ಎಂದು ಗ್ರಾಮದ ರತ್ನಾಕರ, ರವಿ ಹಾಗೂ ಕೆಲವು ಮಹಿಳೆಯರು ತೀವ್ರ ವಿರೋಧ ವ್ಯಕ್ತಪಡಿಸಿ ವಾಗ್ವಾದಕ್ಕೆ ಇಳಿದಿದ್ದಾರೆ

35
ತಂದೆ-ಮಗನ ಮೇಲೆ ಜಾತಿನಿಂದನೆ ಮತ್ತು ಬೆದರಿಕೆ

ವಿದ್ಯುತ್ ಕಂಬ ಪರಿಶೀಲಿಸುತ್ತಿದ್ದ ವೆಂಕಟೇಶ್ ನಾಯಕ್ ಹಾಗೂ ಅವರ ಮಗನ ಮೇಲೆ ಆರೋಪಿಗಳು ಹಲ್ಲೆ ನಡೆಸಲು ಮುಂದಾಗಿದ್ದಾರೆ. ಅಷ್ಟೇ ಅಲ್ಲದೆ, ಅಮಾನವೀಯವಾಗಿ ಜಾತಿನಿಂದನೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಒಡ್ಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಘಟನೆಯಿಂದಾಗಿ ಬಹಿಷ್ಕಾರಕ್ಕೆ ಒಳಗಾದ ಕುಟುಂಬಗಳು ತೀವ್ರ ಭೀತಿಯಲ್ಲಿ ದಿನ ಕಳೆಯುವಂತಾಗಿದೆ.

45
ಅಧಿಕಾರಿಗಳ ಮೊರೆ ಹೋದ ಸಂತ್ರಸ್ತ ಎಲೆಕ್ಟ್ರಿಷಿಯನ್

ತಮ್ಮ ಮೇಲೆ ನಡೆದ ಹಲ್ಲೆ ಯತ್ನ ಹಾಗೂ ಜಾತಿನಿಂದನೆಯ ಕುರಿತು ವೆಂಕಟೇಶ್ ನಾಯಕ್ ಅವರು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. 

55
ಗ್ರಾಮಸ್ಥರು ಆತಂಕ

ರತ್ನಾಕರ, ರವಿ ಸೇರಿದಂತೆ ಮೂವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಅವರು ಒತ್ತಾಯಿಸಿದ್ದಾರೆ. ಬಹಿಷ್ಕಾರದಂತಹ ಸಾಮಾಜಿಕ ಪಿಡುಗು ಇನ್ನೂ ಜೀವಂತವಾಗಿರುವುದು ಗ್ರಾಮದಲ್ಲಿ ಆತಂಕ ಮೂಡಿಸಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories