ಕುಶಲೋಪರಿ ನಡುವೆಯೇ ಸಿಎಂ ಸಿದ್ದರಾಮಯ್ಯ ಅವರು ಆರ್. ಅಶೋಕ್ ಅವರನ್ನು ನೋಡಿ, 'ಏನು ಅಶೋಕ್, ಸಣ್ಣಗಾಗಿದ್ಯಾ?' ಎಂದು ತಕ್ಷಣ ಕೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಶೋಕ್, 'ನಾಟಿ ಕೋಳಿ ತಿನ್ನುವುದು ಬಿಟ್ಟುಬಿಟ್ಟಿದ್ದೀನಿ ಸಾರ್' ಎಂದು ಹೇಳಿದ್ದಾರೆ.
ಇದಕ್ಕೆ ತಕ್ಷಣವೇ ಹಾಸ್ಯಮಿಶ್ರಿತ ಧ್ವನಿಯಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, 'ಏಯ್, ಅದೆಲ್ಲಾ ಬಿಡಬಾರದು. ನೀನು ತಿನ್ನಬೇಕು, ಏನೂ ಆಗಲ್ಲ' ಎಂದು ಸಲಹೆ ನೀಡಿದ್ದಾರೆ. ಆಡಳಿತ ಮತ್ತು ವಿಪಕ್ಷ ನಾಯಕರು ಈ ರೀತಿ ಪರಸ್ಪರ ಹಗುರವಾಗಿ ಮಾತುಕತೆ ನಡೆಸಿ ನಕ್ಕಿದ್ದು, ಅಲ್ಲಿನ ವಾತಾವರಣವನ್ನು ನಗೆಗಡಲಲ್ಲಿ ತೇಲಿಸಿತು. ನಾಟಿ ಕೋಳಿ ತಿನ್ನುವ ಕುರಿತು ಸಿಎಂ ನೀಡಿದ ಸಲಹೆ ಅಲ್ಲಿ ನೆರೆದಿದ್ದ ಎಲ್ಲರ ಮುಖದಲ್ಲಿ ನಗು ತರಿಸಿತ್ತು.