ಕಡು ಬಡ ಕನ್ನಡಿಗನಿಗೆ ಆರ್ಥಿಕ ಸಬಲತೆ ಕೊಡುವ ಅವಶ್ಯಕತೆ ಇದೆ. ಇದಕ್ಕೆ ಪೂರಕವಾಗಿ ನಮಗೆ ಶಿಕ್ಷಣ(Education) ಕ್ಷೇತ್ರದ ಬೆಂಬಲ ಬೇಕು. ಕೌಶಲ್ಯ ತರಬೇತಿ, ಉನ್ನತ ಶಿಕ್ಷಣದಲ್ಲಿ ಕನ್ನಡ ಬಳಕೆ ಸೇರಿದಂತೆ ಹಲವು ಸವಾಲುಗಳನ್ನು ಎದುರಿಸಬೇಕಿದೆ. ಅದಕ್ಕೆ ನಾವು ಸಿದ್ಧವಾಗಿದ್ದೇವೆ ಎಂದರು. ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಸ್ವಾಮೀಜಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ಕುಮಾರ್, ಅಕ್ಕ ಸಂಘಟನೆಯ ಅಧ್ಯಕ್ಷ ತುಮಕೂರು ದಯಾನಂದ ಸೇರಿ ಹಲವರು ಹಾಜರಿದ್ದರು.