ಮಹಾಲಿಂಗ ನಾಯ್ಕ ಒಂದು ಎಕ್ರೆಯಲ್ಲಿ ಅಡಿಕೆ, ತೆಂಗು, ಬಾಳೆ, ಕಾಳುಮೆಣಸಿನ ಕೃಷಿ ಕೈಗೊಂಡಿದ್ದಾರೆ. ಇನ್ನೊಂದು ಎಕ್ರೆಯಲ್ಲಿ ಕಾಡು ಬೆಳೆಸಿದ್ದಾರೆ. ಗೇರು ಕೃಷಿಯೂ ಇದೆ. ಮಣ್ಣಿನ ಟ್ಯಾಾಂಕಿಯಿಂದ ವಿದ್ಯುತ್ ಖರ್ಚಿಲ್ಲದೆ ಗ್ರಾವಿಟಿ ಮೂಲಕ ಅಡಿಕೆ, ತೆಂಗು ಮತ್ತು ಬಾಳೆ ಗಿಡಗಳಿಗೆ ನೀರು ಉಣಿಸುತ್ತಾಾರೆ. ಅವರ ತೋಟದಲ್ಲಿ ೩೦೦ ಅಡಕೆ, 75 ತೆಂಗು, 200 ಬಾಳೆ ಗಿಡಗಳಿವೆ. ಹಟ್ಟಿಗೊಬ್ಬರ, ಕಾಂಪೋಸ್ಟ್ ಹೊರತು ಬೇರೆ ಯಾವುದೇ ಗೊಬ್ಬರದ ಬಳಸಿಲ್ಲ. ಇಂಗು ಗುಂಡಿಗಳ ಮೂಲಕ ಜಲಕೊಯ್ಲು ಮಾಡುತ್ತಾಾರೆ. ನಾಲ್ಕು ವರ್ಷಗಳ ಹಿಂದೆ ಎರಡು ಬೋರ್ವೆಲ್ ತೆಗೆಸಿದ್ದಾರೆ. ಮೊದಲ ಬೋರ್ವೆಲ್ ೪೦೦ ಅಡಿ ಸಾಗಿದ್ದರೂ ನೀರು ದೊರೆಯಲಿಲ್ಲ. ಎರಡನೇ ಬೋರ್ನಲ್ಲಿ ೩೭೦ ಅಡಿ ತಲುಪುವ ಹೊತ್ತಿಗೆ ಒಂದು ಇಂಚು ನೀರು ಸಿಕ್ಕಿದೆ.