ದಾವಣಗೆರೆ: ಕುಕ್ಕವಾಡ ಅರಣ್ಯದಲ್ಲಿ ಕಬ್ಬಿಣದ ಅದಿರು ದಂಧೆ ಬಯಲು! ಟ್ರ್ಯಾಕ್ಟರ್‌ನಲ್ಲಿ ಸಾಗಿಸುತ್ತಿದ್ದ ನಾಲ್ವರು ಅರೆಸ್ಟ್, ಓರ್ವ ಪರಾರಿ!

Published : Jun 11, 2026, 10:41 AM IST

ದಾವಣಗೆರೆ ಜಿಲ್ಲೆಯ ಚನ್ನಗಿರಿ ವಲಯ ವ್ಯಾಪ್ತಿಯ ಕುಕ್ಕವಾಡ ಮೀಸಲು ಅರಣ್ಯದಲ್ಲಿ ನಡೆಯುತ್ತಿದ್ದ ಅಕ್ರಮ ಕಬ್ಬಿಣದ ಅದಿರು ದಂಧೆ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ.

PREV
18
ಕುಕ್ಕವಾಡ ಅರಣ್ಯದಲ್ಲಿ ಅಕ್ರಮವಾಗಿ ಗಣಿಗಾರಿಕೆ ನಾಲ್ವರ ಬಂಧನ

ಅಕ್ರಮ ಗಣಿಗಾರಿಕೆ ಮತ್ತು ಸಾಗಾಟದಲ್ಲಿ ತೊಡಗಿದ್ದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನ ಬಂಧಿಸಿದ ಘಟನೆ ದಾವನಗೆರೆ ಜಿಲ್ಲೆಯ ಚನ್ನಗಿರಿ ವಲಯ ವ್ಯಾಪ್ತಿಯ ಕುಕ್ರವಾಡ ಮೀಸಲು ಅರಣ್ಯದಲ್ಲಿ ನಡೆದಿದೆ.

28
ಅರಣ್ಯದಲ್ಲಿ ಕಬ್ಬಿಣದ ಅದಿರು ಅಕ್ರಮ ಸಾಗಾಟ

ಆರೋಪಿಗಳು ಮೀಸಲು ಅರಣ್ಯ ಪ್ರದೇಶದಲ್ಲೇ ಕಬ್ಬಿಣದ ಅದಿರು ಕಲ್ಲುಗಳನ್ನು ಅಕ್ರಮವಾಗಿ ಸಂಗ್ರಹಿಸಿ, ಬಳಿಕ ಅವುಗಳನ್ನು ಮಾರಾಟ ಮಾಡಲು ಸಿದ್ಧತೆ ನಡೆಸುತ್ತಿದ್ದರು. ಹಲವು ದಿನಗಳಿಂದ ಈ ಚಟುವಟಿಕೆ ನಡೆಯುತ್ತಿತ್ತು ಎನ್ನಲಾಗಿದೆ.

38
ದಾವಣಗೆರೆ: ಟ್ರ್ಯಾಕ್ಟರ್‌ನಲ್ಲಿ ಕಬ್ಬಿಣದ ಅದಿರು ಸಾಗಾಟಕ್ಕೆ ಯತ್ನ!

ಕಾನೂನುಬಾಹಿರವಾಗಿ ಸಂಗ್ರಹಿಸಿದ ಅದಿರು ಕಲ್ಲುಗಳನ್ನು ಟ್ರ್ಯಾಕ್ಟರ್ ಮತ್ತು ಟ್ರೈಲರ್ ಮೂಲಕ ಸಾಗಿಸಿ ಮಾರಾಟ ಮಾಡಲು ಐವರು ಆರೋಪಿಗಳು ಮುಂದಾಗಿದ್ದರು. ಈ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ ನಡೆದಿದ್ದು, ಆರೋಪಿಗಳ ಯೋಜನೆ ವಿಫಲವಾಗಿದೆ.

48
ಒಬ್ಬ ಪರಾರಿ, ನಾಲ್ವರು ಬಂಧನ

ದಾಳಿ ವೇಳೆ ಐವರ ಪೈಕಿ ಒಬ್ಬ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಉಳಿದ ನಾಲ್ವರನ್ನು ಅಧಿಕಾರಿಗಳು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಪರಾರಿಯಾದ ಆರೋಪಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

58
ತೋಟದಲ್ಲಿ ಅಡಗಿಸಿಟ್ಟಿದ್ದ ಅದಿರು

ಬಂಧಿತರು ಅರಣ್ಯ ಪ್ರದೇಶದಿಂದ ಸಂಗ್ರಹಿಸಿದ್ದ ಕಬ್ಬಿಣದ ಅದಿರು ಕಲ್ಲುಗಳನ್ನು ಸಮೀಪದ ತೋಟವೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದರು. ಬಳಿಕ ಅವುಗಳನ್ನು ಬೇರೆಡೆಗೆ ಸಾಗಿಸುವ ಯೋಜನೆ ರೂಪಿಸಿದ್ದರು ಎನ್ನಲಾಗಿದೆ.

68
ಬಂಧಿತರು ಯಾರು?

ಬಂಧಿತರನ್ನು ಸಯ್ಯದ್ ಸಗೀರ್ ಅಹ್ಮದ್ ಅಲಿಯಾಸ್ ಕಲೀಮ್, ಪ್ರಸನ್ನ ಅಲಿಯಾಸ್ ತಿಪ್ಪೇಶಪ್ಪ ಉಗ್ರಾಣಿ, ನಜೀಬ್ ಬಿನ್ ಅಬ್ದುಲ್ ಸಾಬ್ ಹಾಗೂ ಮುಕ್ರಂ ಬಿನ್ ಅಬ್ದುಲ್ ರಹೀಮ್ ಎಂದು ಗುರುತಿಸಲಾಗಿದೆ. ಆರೋಪಿಗಳ ಹಿನ್ನೆಲೆ ಕುರಿತು ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.

78
ಅಕ್ರಮಕ್ಕೆ ಬಳಸಿದ್ದ ಟ್ರ್ಯಾಕ್ಟರ್-ಟ್ರೈಲರ್ ಜಪ್ತಿ

ಕಾರ್ಯಾಚರಣೆ ವೇಳೆ ಕಬ್ಬಿಣದ ಅದಿರು ತುಂಬಿದ್ದ ಒಂದು ಟ್ರ್ಯಾಕ್ಟರ್ ಟ್ರೈಲರ್‌ನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಜಪ್ತಿ ಮಾಡಿದ ಅದಿರು ಹಾಗೂ ವಾಹನದ ಮೌಲ್ಯವನ್ನು ಅಂದಾಜು ಮಾಡಲಾಗುತ್ತಿದೆ.

88
ತನಿಖೆ ಮುಂದುವರಿಕೆ

ಭದ್ರಾವತಿ ಉಪ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಕುಮಾರ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಅಕ್ರಮ ಗಣಿಗಾರಿಕೆ ಜಾಲದ ಸುಳಿವು ಸಿಕ್ಕಿದೆ. ಪ್ರಕರಣ ದಾಖಲಿಸಿಕೊಂಡಿರುವ ಅರಣ್ಯ ಇಲಾಖೆ ಸಿಬ್ಬಂದಿ, ಇದರ ಹಿಂದೆ ಇನ್ನೂ ಯಾರಾದರೂ ಇದ್ದಾರೆಯೇ ಎಂಬ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories