ರಾಮ ಮಂದಿರದಲ್ಲಿ ಡಿಸಿಎಂ ಅಶ್ವತ್ಥ ನಾರಾಯಣ ವಿಶೇಷ ಪೂಜೆ

Kannadaprabha News   | Asianet News
Published : Aug 06, 2020, 07:22 AM IST

ಬೆಂಗಳೂರು(ಆ.06): ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಯುತ್ತಿದ್ದರೆ, ಮಲ್ಲೇಶ್ವರದ ರಾಮಮಂದಿರದಲ್ಲಿ ವಿಶೇಷ ಪೂಜಾ ಸಂಭ್ರಮ.

PREV
14
ರಾಮ ಮಂದಿರದಲ್ಲಿ ಡಿಸಿಎಂ ಅಶ್ವತ್ಥ ನಾರಾಯಣ ವಿಶೇಷ ಪೂಜೆ

ಬುಧವಾರ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ನೇತೃತ್ವದಲ್ಲಿ ನಡೆದ ಪೂಜಾ ಕೈಂಕರ್ಯದಲ್ಲಿ ಬಿಬಿಎಂಪಿ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ್‌ ರಾಜು ಸೇರಿದಂತೆ ಹಲವು ಬಿಜೆಪಿ ಕಾರ್ಯಕರ್ತರು ಭಾಗಹಿಸಿ ಸಂತಸ ವ್ಯಕ್ತಪಡಿಸಿದ್ದಾರೆ. 

ಬುಧವಾರ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ನೇತೃತ್ವದಲ್ಲಿ ನಡೆದ ಪೂಜಾ ಕೈಂಕರ್ಯದಲ್ಲಿ ಬಿಬಿಎಂಪಿ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ್‌ ರಾಜು ಸೇರಿದಂತೆ ಹಲವು ಬಿಜೆಪಿ ಕಾರ್ಯಕರ್ತರು ಭಾಗಹಿಸಿ ಸಂತಸ ವ್ಯಕ್ತಪಡಿಸಿದ್ದಾರೆ. 

24

ಪೂಜೆ ಬಳಿಕ ಅಲ್ಲಿ ನೆರೆದಿದ್ದ ಎಲ್ಲರಿಗೂ ಸಿಹಿ ಹಂಚಿ ನೂರಾರು ವರ್ಷಗಳಿಂದ ನೆನೆಗುದ್ದಿಗೆ ಬಿದ್ದಿದ್ದ ವಿವಾದಕ್ಕೆ ತೆರೆ ಎಳೆದಿದ್ದಕ್ಕೆ ಧನ್ಯತಾಭಾವ ಪ್ರದರ್ಶಿಸಿದರು. ರಾಮನ ಜನ್ಮಭೂಮಿಯಲ್ಲಿಯೇ ಮಂದಿರ ನಿರ್ಮಾಣವಾಗಬೇಕು ಎನ್ನುವ ಪ್ರತಿಯೊಬ್ಬ ಭಾರತೀಯನ ಕನಸು ನನಸಾಗಿದ್ದು ನಿಜಕ್ಕೂ ಸಂತಸದ ವಿಚಾರ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ಹೇಳಿದರು.

ಪೂಜೆ ಬಳಿಕ ಅಲ್ಲಿ ನೆರೆದಿದ್ದ ಎಲ್ಲರಿಗೂ ಸಿಹಿ ಹಂಚಿ ನೂರಾರು ವರ್ಷಗಳಿಂದ ನೆನೆಗುದ್ದಿಗೆ ಬಿದ್ದಿದ್ದ ವಿವಾದಕ್ಕೆ ತೆರೆ ಎಳೆದಿದ್ದಕ್ಕೆ ಧನ್ಯತಾಭಾವ ಪ್ರದರ್ಶಿಸಿದರು. ರಾಮನ ಜನ್ಮಭೂಮಿಯಲ್ಲಿಯೇ ಮಂದಿರ ನಿರ್ಮಾಣವಾಗಬೇಕು ಎನ್ನುವ ಪ್ರತಿಯೊಬ್ಬ ಭಾರತೀಯನ ಕನಸು ನನಸಾಗಿದ್ದು ನಿಜಕ್ಕೂ ಸಂತಸದ ವಿಚಾರ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ಹೇಳಿದರು.

34

500 ವರ್ಷಗಳಿಂದ ನಡೆಯುತ್ತಿದ್ದ ಸಾತ್ವಿಕ ಸಂಘರ್ಷ ಮತ್ತು 134 ವರ್ಷಗಳ ಕಾನೂನು ಹೋರಾಟದ ಬಳಿಕ ಮಂದಿರ ನಿರ್ಮಾಣಕ್ಕೆ ಹಾದಿ ಸುಗಮವಾಗಿದೆ. ಇವತ್ತಿನ ಈ ಕ್ಷಣಕ್ಕಾಗಿ ಸಂಕಲ್ಪ, ತ್ಯಾಗ ಮತ್ತು ಬಲಿದಾನ ಮಾಡಿದ ಎಲ್ಲಾ ಶ್ರದ್ಧಾಳುಗಳಿಗೂ ನಮನಗಳು. ಸರ್ವಧರ್ಮಿಯರ ಬೆಂಬಲದೊಂದಿಗೆ ನಡೆಯುತ್ತಿರುವ ಈ ಕಾರ್ಯವನ್ನು ಭಾರತದ ಭಾವೈಕ್ಯತೆಯ ಸಂಕೇತ ಎಂದೇ ಹೇಳಬಹುದು. ಶಾಂತಿಯ ನಾಡಿನಲ್ಲಿ ಸಂಭ್ರಮ ಮನೆ ಮಾಡಿದೆ. ಎಲ್ಲ ಸಂಕಷ್ಟಗಳು ದೂರವಾಗಲಿವೆ. ರಾಮಮಂದಿರ ನಿರ್ಮಾಣದ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಡೆದುಕೊಂಡು ರೀತಿ ಇಡೀ ನಾಡು ಮೆಚ್ಚುವಂತಹದ್ದು ಎಂದರು.

500 ವರ್ಷಗಳಿಂದ ನಡೆಯುತ್ತಿದ್ದ ಸಾತ್ವಿಕ ಸಂಘರ್ಷ ಮತ್ತು 134 ವರ್ಷಗಳ ಕಾನೂನು ಹೋರಾಟದ ಬಳಿಕ ಮಂದಿರ ನಿರ್ಮಾಣಕ್ಕೆ ಹಾದಿ ಸುಗಮವಾಗಿದೆ. ಇವತ್ತಿನ ಈ ಕ್ಷಣಕ್ಕಾಗಿ ಸಂಕಲ್ಪ, ತ್ಯಾಗ ಮತ್ತು ಬಲಿದಾನ ಮಾಡಿದ ಎಲ್ಲಾ ಶ್ರದ್ಧಾಳುಗಳಿಗೂ ನಮನಗಳು. ಸರ್ವಧರ್ಮಿಯರ ಬೆಂಬಲದೊಂದಿಗೆ ನಡೆಯುತ್ತಿರುವ ಈ ಕಾರ್ಯವನ್ನು ಭಾರತದ ಭಾವೈಕ್ಯತೆಯ ಸಂಕೇತ ಎಂದೇ ಹೇಳಬಹುದು. ಶಾಂತಿಯ ನಾಡಿನಲ್ಲಿ ಸಂಭ್ರಮ ಮನೆ ಮಾಡಿದೆ. ಎಲ್ಲ ಸಂಕಷ್ಟಗಳು ದೂರವಾಗಲಿವೆ. ರಾಮಮಂದಿರ ನಿರ್ಮಾಣದ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಡೆದುಕೊಂಡು ರೀತಿ ಇಡೀ ನಾಡು ಮೆಚ್ಚುವಂತಹದ್ದು ಎಂದರು.

44

ಡಿಸಿಎಂ ಅಶ್ವತ್ಥನಾರಾಯಣ ನೇತೃತ್ವದಲ್ಲಿ ಸಿಹಿ ಹಂಚಿ ಸಂಭ್ರಮ

ಡಿಸಿಎಂ ಅಶ್ವತ್ಥನಾರಾಯಣ ನೇತೃತ್ವದಲ್ಲಿ ಸಿಹಿ ಹಂಚಿ ಸಂಭ್ರಮ

click me!

Recommended Stories