ಕೊರೋನಾ ವಿರುದ್ಧ ಹೋರಾಟ: ಇಮ್ಯೂನಿಟಿ ಹೆಚ್ಚಿಸುವ 8 ಉತ್ಪನ್ನ ಬಿಡುಗಡೆ

First Published Aug 7, 2020, 10:34 AM IST

ಬೆಂಗಳೂರು(ಆ.07):  ಕೊರೋನಾ ಸೋಂಕಿನ ವಿರುದ್ಧ ಹೋರಾಡಲು ಅಗತ್ಯವಾದ ರೋಗ ನಿರೋಧಕ ಶಕ್ತಿ ಹೆಚ್ಚಿಸಬಲ್ಲ ಹಾಗೂ ವೈರಾಣು ಹರಡುವಿಕೆ ನಿಯಂತ್ರಿಸಲು ಪೂರಕವಾದ ಎಂಟು ವಿವಿಧ ಉತ್ಪನ್ನಗಳನ್ನು ಉಪಮುಖ್ಯಮಂತ್ರಿ ಡಾ. ಸಿ.ಎನ್‌.ಅಶ್ವತ್ಥನಾರಾಯಣ ಬಿಡುಗಡೆ ಮಾಡಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ನಾವೀನ್ಯ ಮತ್ತು ತಂತ್ರಜ್ಞಾನ ಸೊಸೈಟಿ (ಕೆಐಟಿಎಸ್‌) ಹಾಗೂ ಬೆಂಗಳೂರು ಜೈವಿಕ ನಾವೀನ್ಯತೆ ಕೇಂದ್ರ (ಬಿಬಿಸಿ) ಅಭಿವೃದ್ಧಿಪಡಿಸಿರುವ ಉತ್ಪನ್ನಗಳನ್ನು ಬಿಡುಗಡೆ ಮಾಡಲಾಯಿತು.
undefined
ಬಿಬಿಸಿ ಕೇಂದ್ರದಲ್ಲಿ ರಾಜ್ಯ ಸೇರಿದಂತೆ ದೇಶದ ವಿವಿಧ ಭಾಗಗಳ ನವೋದ್ಯಮಿಗಳು ಹೊಸ ರೀತಿಯ ಆವಿಷ್ಕಾರಗಳನ್ನು ಮಾಡಿದ್ದು ಕೊರೋನಾ ವಿರುದ್ಧ ಹೋರಾಡಲು ನೆರವು
undefined
ಜೈವಿಕ ತಂತ್ರಜ್ಞಾನ ಇಲಾಖೆ ಈ ನಿಟ್ಟಿನಲ್ಲಿ ಮಹತ್ವದ ವೇದಿಕೆಯನ್ನು ಕಲ್ಪಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅಶ್ವತ್ಥನಾರಾಯಣ
undefined
ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣರೆಡ್ಡಿ, ಕೇಂದ್ರ ಸರ್ಕಾರದ ಪ್ರಧಾನ ಸಲಹೆಗಾರ ಪೊ›.ವಿಜಯ್‌ ರಾಘವನ್‌ (ಜ್ಯೂಮ್‌ ಆಪ್‌ ಮೂಲಕ ಭಾಗಿ), ಕೆಐಟಿಎಸ್‌ ವ್ಯವಸ್ಥಾಪಕ ನಿರ್ದೇಶಕಿ ಮೀನಾ ನಾಗರಾಜ್‌, ಡಾ.ಜಿತೇಂದ್ರ ಕುಮಾರ್‌ ಸೇರಿ ಹಲವರು ಹಾಜರಿದ್ದರು.
undefined
click me!