ಮೇಕೆದಾಟು ಯೊಜನೆ ಜಾರಿ ಸಂಬಂಧ ಎದುರಾಗಿರುವ ಸಮಸ್ಯೆಗಳ ಕುರಿತು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ಜತೆ ಸಭೆ ನಡೆಸಲಾಗಿದೆ. ಮುಂದಿನ ದಿನದಲ್ಲಿ ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ಕೊರತೆ ಎದುರಾಗಬಾರದು ಎನ್ನುವ ಪ್ರಮುಖ ಉದ್ದೇಶವೂ ಈ ಯೋಜನೆ ಹಿಂದೆ ಇದೆ ಎಂದು ತಿಳಿಸಿದ ಅಶ್ವತ್ಥನಾರಾಯಣ
undefined
ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಈಗಾಗಲೇ ಎರಡು ಬಾರಿ ಕೇಂದ್ರ ಸಚಿವರ ಜತೆಗೂ ಮಾತುಕತೆ ನಡೆಸಿದ್ದು, ಅದಷ್ಟು ಬೇಗ ಒಪ್ಪಿಗೆ ಸಿಗುವ ವಿಶ್ವಾಸ ಇದೆ ಎಂದು ಟ್ವಿಟರ್ನಲ್ಲಿ ಹೇಳಿದ್ದಾರೆ.
undefined
ಸಮಗ್ರ ಯೋಜನಾ ವರದಿಯ ಪರಿಶೀಲನೆ ಕೇಂದ್ರ ಜಲ ಆಯೋಗದ ಮುಂದೆ ಇದೆ. ಅದನ್ನು ತ್ವರಿತವಾಗಿ ಮಾಡಿ ಮುಗಿಸುವಂತೆಯೂ ಆಯೋಗವನ್ನು ಕೋರಲಾಗುವುದು. ಹಾಗೆಯೇ ಅರಣ್ಯ ಮತ್ತು ಪರಿಸರ ಸಚಿವಾಲಯದ ಒಪ್ಪಿಗೆ ಕೂಡ ಬೇಕಾಗಿದ್ದು, ಎಲ್ಲವನ್ನೂ ತ್ವರಿತವಾಗಿ ಪಡೆಯಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದ್ದಾರೆ.
undefined
ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಕಾವೇರಿ ನೀರು ಹಂಚಿಕೆಗೆ ಈ ಯೋಜನೆಯಿಂದ ಹೆಚ್ಚು ಅನುಕೂಲವಾಗಲಿದೆ. ಹಾಗೆಯೇ 400 ಮೆಗಾವಾಟ್ ವಿದ್ಯುತ್ ಉತ್ಪಾದಿಸಬಹುದು. ಒಟ್ಟಾರೆ ಈ ಯೋಜನೆಗೆ .9 ಸಾವಿರ ಕೋಟಿ ಖರ್ಚಾಗುವ ಅಂದಾಜು ಮಾಡಿದ್ದು, ಕಾವೇರಿ ಅಚ್ಚುಕಟ್ಟು ಪ್ರದೇಶದ ರಾಜ್ಯಗಳಿಗೂ ಹೆಚ್ಚು ಅನುಕೂಲ ಆಗಲಿದೆ ಎಂದಿದ್ದಾರೆ.
undefined