ಸುದ್ದಿಗಾರರ ಜತೆಗೆ ಮಾತನಾಡಿ, ದಿಂಗಾಲೇಶ್ವರ ಶ್ರೀಗಳು ತಮಗೆ ಕ್ಷೇತ್ರ ಬದಲಾವಣೆ ಬಗ್ಗೆ ಕೊಟ್ಟ ಗಡುವು ಭಾನುವಾರಕ್ಕೆ ಮುಗಿಯುತ್ತದೆಯಲ್ಲ? ಎಂಬ ಪ್ರಶ್ನೆಗೆ, ನೋಡೋಣವಂತೆ ಗಡುವು ಮುಗಿದ ಮೇಲೆ ಎಂದಷ್ಟೇ ಪ್ರತಿಕ್ರಿಯಿಸಿದರು. ಧಾರವಾಡ ಮುರುಘಾ ಮಠದ ಶ್ರೀಗಳು ಕೊಟ್ಟ ಎರಡು ದಿನದ ಹೇಳಿಕೆಗಳನ್ನು ಮಾಧ್ಯಮಗಳಲ್ಲಿ ನೋಡಿದ್ದೇನಷ್ಟೇ. ಆ ಬಗ್ಗೆ ತಮಗೆ ಹೆಚ್ಚಿನದೇನು ಗೊತ್ತಿಲ್ಲ ಎಂದರು.