ಆದರೆ, ಈ ಗಾಜಿನ ಸೇತುವೆಗಳು ಯಾವುದೇ ಸುರಕ್ಷತೆ ಇಲ್ಲದೆಯೇ ನಿರ್ಮಾಣವಾಗಿದ್ದು ಪ್ರವಾಸಿಗರಿಗೆ ಅಪಾಯ ತಂದೊಡ್ಡುತ್ತವೆ ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಇದಕ್ಕಿಂತ ಮುಖ್ಯವಾಗಿ ಪಶ್ಚಿಮಘಟ್ಟ ಪ್ರದೇಶದಲ್ಲಿರುವ ಪರಿಸರ ಸೂಕ್ಷ್ಮ ವಲಯದಲ್ಲಿ ಈ ಗಾಜಿನ ಸೇತುವೆಗಳನ್ನು ಅಕ್ರಮವಾಗಿ ನಿರ್ಮಿಸಲಾಗಿದ್ದು, ಪರಿಸರಕ್ಕೆ ಹಾನಿಯಾಗುತ್ತಿದೆ. ಅಲ್ಲದೆ ವನ್ಯಜೀವಿ ಮತ್ತು ಇತರೆ ಅರಣ್ಯ ಜೀವಿಗಳಿಗೆ ತೊಂದರೆಯಾಗುತ್ತಿದೆ. ಹೀಗಾಗಿ ಇವುಗಳನ್ನು ಕೂಡಲೇ ನಿಷೇಧಿಸಬೇಕು ಎಂದು ಕೊಡಗು ಏಕೀಕರಣ ರಂಗದ ಮುಖಂಡರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.