ಟೈಗರ್ ಈಸ್ ಬ್ಯಾಕ್ ಅವರ ನೇತೃತ್ವದಲ್ಲೇ ಸಂಡೂರು ಚುನಾವಣೆ: ಸಚಿವ ಜಮೀರ್ ಅಹಮದ್ ಖಾನ್ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಕೇಸನ್ನು ಎಸ್ ಐಟಿ ತನಿಖೆಗೆ ಕೊಡಲಾಗಿತ್ತು. ಎಲ್ಲಾ ಹಣವನ್ನ ಎಸ್ ಐಟಿ ರಿಕವರಿ ಮಾಡಿದೆ. ಇನ್ನು 3.80 ಲಕ್ಷ ರಿಕವರಿ ಆಗಬೇಕಿದೆ. ಇಡಿಯವರು ಚಾರ್ಜ್ ಶೀಟ್ ಹಾಕಿದ್ದಾರೆ. ಬೈ ಎಲೆಕ್ಷನ್ ಗೆ ನಾಗೇಂದ್ರ ಕರೆದುಕೊಂಡು ಹೋಗ್ತಿರಾ ಎಂಬ ಪ್ರಶ್ನೆ ಬಗ್ಗೆ ಮಾತನಾಡಿ, ಅವರೇ ಎಲೆಕ್ಷನ್ ಮಾಡಬೇಕು. ಟೈಗರ್ ಈಸ್ ಬ್ಯಾಕ್, ಅವರ ನೇತೃತ್ವದಲ್ಲೆ ಚುನಾವಣೆಯಾಗುತ್ತದೆ ಎಂದು ಹೇಳಿದರು.