ಬೆಂಗಳೂರು–ಹುಬ್ಬಳ್ಳಿ ರೈಲ್ವೇ ಮಾರ್ಗದಲ್ಲಿ ಸಂಚರಿಸುವ 7 ರೈಲುಗಳನ್ನು ಸಂಪೂರ್ಣ ರದ್ದು ಮಾಡಲಾಗುತ್ತಿದೆ. ಫೆಬ್ರವರಿ 16 ಮತ್ತು 17 ರಂದು ವಂದೇ ಭಾರತ್ ಮತ್ತು ಜನಶತಾಬ್ದಿ ಸೇರಿದಂತೆ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.
ಬೆಂಗಳೂರು/ಹುಬ್ಬಳ್ಳಿ : ವಂದೇ ಭಾರತ್ ರೈಲು ಆರಂಭವಾದ ನಂತರ ಬೆಂಗಳೂರಿನಿಂದ ರಾಜ್ಯದ ಹಾಗೂ ದೇಶದ ವಿವಿಧ ಭಾಗಗಳಿಗೆ ವೇಗವಾಗಿ ಹಾಗೂ ಆರಾಮವಾಗಿ ಪ್ರಯಾಣಿಸುವ ಅವಕಾಶ ಲಭ್ಯವಾಗಿದೆ. ಆದರೆ ಇದೀಗ ಬೆಂಗಳೂರು–ಹುಬ್ಬಳ್ಳಿ ರೈಲ್ವೇ ಮಾರ್ಗದಲ್ಲಿ ನಡೆಯುತ್ತಿರುವ ಕಾಮಗಾರಿಯ ಹಿನ್ನೆಲೆಯಲ್ಲಿ ವಂದೇ ಭಾರತ್, ಜನಶತಾಬ್ದಿ ಸೇರಿದಂತೆ ಒಟ್ಟು 7 ರೈಲುಗಳ ಸಂಚಾರವನ್ನು ಒಂದು ದಿನ ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ಜೊತೆಗೆ 11ಕ್ಕೂ ಹೆಚ್ಚು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.
28
ಕಾರಣ ಏನು?
ದೇವರಗುಡ್ಡ ಮತ್ತು ಬ್ಯಾಡಗಿ ನಡುವಿನ ಎಲ್ಸಿ ಸಂಖ್ಯೆ 222ರಲ್ಲಿ ತಾತ್ಕಾಲಿಕ ಗರ್ಡರ್ಗಳನ್ನು ಅಳವಡಿಸಿ ತೆಗೆದುಹಾಕುವ ಕಾಮಗಾರಿಯ ಹಿನ್ನೆಲೆಯಲ್ಲಿ, ರೈಲ್ವೆ ಇಲಾಖೆ ಲೈನ್ ಬ್ಲಾಕ್ ಹಾಗೂ ಪವರ್ ಬ್ಲಾಕ್ ಘೋಷಿಸಿದೆ. ಇದರ ಪರಿಣಾಮವಾಗಿ ಫೆಬ್ರವರಿ 16 ಮತ್ತು 17ರಂದು ಹಲವು ರೈಲು ಸೇವೆಗಳಲ್ಲಿ ವ್ಯತ್ಯಯ ಉಂಟಾಗಲಿದೆ.
ಈ ಕುರಿತು ಭಾರತೀಯ ರೈಲ್ವೆ (#IndianRailway) ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಕಾಮಗಾರಿಯ ಕಾರಣದಿಂದ ಕೆಲವು ರೈಲುಗಳು ಸಂಪೂರ್ಣವಾಗಿ ರದ್ದಾಗಲಿದ್ದು, ಇನ್ನೂ ಕೆಲವು ರೈಲುಗಳು ಭಾಗಶಃ ರದ್ದು, ಮಾರ್ಗ ಬದಲಾವಣೆ, ನಿಯಂತ್ರಣ ಹಾಗೂ ಮರುನಿಗದಿಗೆ ಒಳಪಡಲಿವೆ ಎಂದು ತಿಳಿಸಿದೆ.
16589 ಕೆಎಸ್ಆರ್ ಬೆಂಗಳೂರು – ಸಾಂಗ್ಲಿ ಎಕ್ಸ್ಪ್ರೆಸ್ (08-02-2026) – 40 ನಿಮಿಷ
12650 ಹಜರತ್ ನಿಜಾಮುದ್ದೀನ್ – ಯಶವಂತಪುರ ಎಕ್ಸ್ಪ್ರೆಸ್ (09-02-2026) – 55 ನಿಮಿಷ
16535 ಮೈಸೂರು – ಪಂಡರಾಪುರ ಎಕ್ಸ್ಪ್ರೆಸ್ (10-02-2026) – 50 ನಿಮಿಷ
11022 ತಿರುನೇಲ್ವೇಲಿ – ದಾದರ್ ಎಕ್ಸ್ಪ್ರೆಸ್ (16-02-2026) – 110 ನಿಮಿಷ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ