ಬೆಳ್ತಂಗಡಿಯಲ್ಲಿ ಅರುವ ನಾರಾಯಣ ಶೆಟ್ಟಿ ಅವರ ಅಳದಂಗಡಿ ಮೇಳದಲ್ಲಿ ಪತಿ ಹರಿನಾರಾಯಣ ಬೈಪಡಿತ್ತಾಯ ಅವರೊಂದಿಗೆ ಭಾಗವತಿಗೆ ಮಾಡಿ, ಯಕ್ಷಪ್ರೇಮಿಗಳನ್ನು ರಂಜಿಸಿದ್ದಾರೆ. ಯಕ್ಷ ರಂಗದ ಪ್ರಪ್ರಥಮ ಮಹಿಳಾ ಯಕ್ಷಗಾನ ಭಾಗವತೆ ಎಂಬ ಖ್ಯಾತಿ ಕೂಡ ಇವರದ್ದಾಗಿತ್ತು. ಕುಂಬಳೆ, ಬಪ್ಪನಾಡು, ಸುಬ್ರಹ್ಮಣ್ಯ, ಧರ್ಮಸ್ಥಳ, ತಲಕಳ, ಪುತ್ತೂರು, ಕದ್ರಿ, ಅಳದಂಗಡಿ ಮೇಳಗಳಲ್ಲಿ ನಿರಂತರ ಇಪ್ಪತ್ತು ವರ್ಷಗಳ ಕಾಲ ವೃತ್ತಿ ಕಲಾವಿದರಾಗಿಯೂ 17ಕ್ಕೂ ಹೆಚ್ಚು ವರ್ಷಗಳಿಂದ ಅತಿಥಿ ಕಲಾವಿದರಾಗಿಯೂ ಭಾಗವತಿಕೆ ಮಾಡಿದ ಹಿರಿಮೆ ಇದೆ.