ಬೀದರ್ ಜಿಲ್ಲೆಯ ಔರಾದ್ನ ಅಮರೇಶ್ವರ ದೇಗುಲದಲ್ಲಿ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್, ಬೆಳಗಾವಿಯ ಕಪಿಲೇಶ್ವರ ಮಂದಿರದಲ್ಲಿ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ, ದೊಡ್ಡಬಳ್ಳಾಪುರದ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂ.ಟಿ.ಬಿ. ನಾಗರಾಜು, ನಂಜನಗೂಡು ನಂಜುಂಡೇಶ್ವರ ಸನ್ನಿಧಿಯಲ್ಲಿ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಮಂಡ್ಯದ ಮೇಲುಕೋಟೆ ಚಲುವರಾಯಸ್ವಾಮಿ ಸನ್ನಿಧಿಯಲ್ಲಿ ಶಾಸಕ ಸಿ.ಎಸ್.ಪುಟ್ಟರಾಜು, ಚಾಮುಂಡಿಬೆಟ್ಟದಲ್ಲಿ ಶಾಸಕ ಜಿ.ಟಿ. ದೇವೇಗೌಡ ದಂಪತಿ ಸೇರಿ ವಿವಿಧೆಡೆ ಸಚಿವರು, ಶಾಸಕರು ಹಾಗೂ ಅಧಿಕಾರಿಗಳ ಉಪಸ್ಥಿತಿಯಲ್ಲಿ ಗೋಪೂಜೆ ಸಾಂಗವಾಗಿ ನೆರವೇರಿತು.