ಕರ್ನಾಟಕ ಸರ್ಕಾರ ಯೋಜನೆಯೊಂದನ್ನು ಪಿಯು ವಿದ್ಯಾರ್ಥಿಗಳಿಗೂ ವಿಸ್ತರಿಸಲು ಚಿಂತನೆ ನಡೆಸಿದೆ. ಮಕ್ಕಳ ದಿನಾಚರಣೆಯಂದು ಈ ಬಗ್ಗೆ ಅಧಿಕೃತ ಘೋಷಣೆ ಮಾಡುವ ಸಾಧ್ಯತೆಯಿದ್ದು, ಇದರಿಂದ ಗ್ರಾಮೀಣ ಭಾಗದ 3 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.
ಮಕ್ಕಳ ದಿನಾಚರಣೆಯಂದು ರಾಜ್ಯದ ಪಿಯು ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್ ನೀಡಲು ಸರ್ಕಾರ ಪ್ಲಾನ್ ಮಾಡಿಕೊಂಡಿದೆ. ನವೆಂಬರ್ 14ರಂದು ಸರ್ಕಾರದಿಂದ ಈ ಸಂಬಂಧ ಅಧಿಕೃತ ಘೋಷಣೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
24
ಯೋಜನೆ ವಿಸ್ತರಣೆಗೆ ಚಿಂತನೆ
ಸದ್ಯ 1 ರಿಂದ 10ನೇ ತರಗತಿ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ನೀಡಲಾಗುತ್ತಿದೆ. ಈ ಯೋಜನೆಯನ್ನು ಪಿಯು ವಿದ್ಯಾರ್ಥಿಗಳಿಗೆ ವಿಸ್ತರಣೆ ಮಾಡಲು ಸಿಎಂ ಸಿದ್ದರಾಮಯ್ಯ ಸರ್ಕಾರ ಚಿಂತನೆ ನಡೆಸಿದೆಯಂತೆ. ಈ ವರ್ಷದಿಂದಲೇ ಪಿಯು ವಿದ್ಯಾರ್ಥಿಗಳಿಗೆ ಊಟ ವಿತರಿಸುವ ಯೋಜನೆಗೆ ಚಾಲನೆ ನೀಡಲು ಸರ್ಕಾರ ಪ್ಲಾನ್ ಮಾಡಿಕೊಳ್ಳಲಾಗಿದೆ.
34
ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗಾಗಿ
ರಾಜ್ಯದಲ್ಲಿ ಸುಮಾರು 3 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಸರ್ಕಾರಿ ಕಾಲೇಜುಗಳಲ್ಲಿ ಓದುತ್ತಿದ್ದಾರೆ. ಅದರಲ್ಲಿಯೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಸರ್ಕಾರಿ ಕಾಲೇಜ್ಗೆ ದಾಖಲಾತಿ ಪಡೆದುಕೊಂಡಿದ್ದಾರೆ. ಹಾಗಾಗಿ ಈ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಯೋಜನೆ ವಿಸ್ತರಣೆಗೆ ಸರ್ಕಾರ ಮುಂದಾಗಿದ ಎಂಬ ಮಾಹಿತಿ ಲಭ್ಯವಾಗಿದೆ.
2002-03ನೇ ಸಾಲಿನಲ್ಲಿ ಕರ್ನಾಟಕ ಸರ್ಕಾರ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ರಾಜ್ಯಾದ್ಯಂತ ಆರಂಭಿಸಿದೆ. ಶಾಲಾ ಮಕ್ಕಳಿಗೆ ಉತ್ತಮ ಪೋಷಕಾಂಶ ಭರಿತ ಆಹಾರವನ್ನು ಒದಗಿಸುವ ದೃಷ್ಟಿಯಿಂದ ಸರ್ಕಾರವು ಊಟದಲ್ಲಿ ತೊಗರಿಬೇಳೆ, ಸಂಸ್ಕರಿತ ತಾಳೆಎಣ್ಣೆ ಮತ್ತು ಕಡಲೆಬೇಳೆಗಳನ್ನೊಳಗೊಂಡ ಆಹಾರವನ್ನು ಒದಗಿಸುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ