ಗೃಹಲಕ್ಷ್ಮಿ ಯೋಜನೆಗೆ ಹೊಸ ಅರ್ಜಿ ಸಲ್ಲಿಕೆ ಆರಂಭವಾಗಿಲ್ಲ; ಫಲಾನುಭವಿಗಳು ನಾಡಕಚೇರಿಗೆ ಅಲೆದಾಡಬೇಡಿ!

Published : Jun 16, 2026, 03:20 PM IST

ಕರ್ನಾಟಕ ಸರ್ಕಾರ ಗೃಹಲಕ್ಷ್ಮಿ ಯೋಜನೆಯಲ್ಲಿ (Karnataka Govt Gruha Lakshmi Scheme) ಪಾರದರ್ಶಕತೆ ತರಲು ಬಯೋಮೆಟ್ರಿಕ್ ಜಾರಿಗೆ ತರುತ್ತಿದೆ. ಈ ಬಗ್ಗೆ ಇನ್ನೂ ತಾಂತ್ರಿಕ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ನಂತರವೇ ಹೊಸ ಅರ್ಜಿ ಸಲ್ಲಿಕೆ ಆರಂಭವಾಗುತ್ತದೆ. ಈವರೆಗೆ ಯಾವುದೇ ಅರ್ಜಿ ಆಹ್ವಾನ ಮಾಡಿಲ್ಲ.

PREV
15
ಗೃಹಲಕ್ಷ್ಮಿ ಫಲಾನುಭವಿಗಳು ಅಲೆದಾಡಬೇಡಿ

ಬೆಂಗಳೂರು (ಜೂ.16): ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿಗಳಲ್ಲಿ ಒಂದಾದ 'ಗೃಹಲಕ್ಷ್ಮಿ' ಯೋಜನೆಗೆ (ಮನೆ ಯಜಮಾನಿಗೆ ಮಾಸಿಕ ₹2000 ಗೌರವಧನ) ಸಂಬಂಧಿಸಿದಂತೆ ಪ್ರಮುಖ ಅಪ್‌ಡೇಟ್ ಒಂದು ಹೊರಬಿದ್ದಿದೆ. ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ಪಡೆಯಲು ಇಚ್ಛಿಸುವ ಹೊಸ ಫಲಾನುಭವಿಗಳು ಇನ್ನು ಮುಂದೆ ಹೊಸ ಅರ್ಜಿ ಸಲ್ಲಿಕೆ ಮಾಡುವುದು ಮತ್ತು ಬಯೋಮೆಟ್ರಿಕ್ (ಬೆರಳಚ್ಚು) ನೀಡುವುದು ಕಡ್ಡಾಯವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸೂಚನೆ ನೀಡಿದ್ದಾರೆ.

25
ಬಯೋಮೆಟ್ರಿಕ್ ಕಡ್ಡಾಯವೇಕೆ?:

ಯೋಜನೆಯಲ್ಲಿ ಪಾರದರ್ಶಕತೆ ತರಲು ಮತ್ತು ಅರ್ಹ ಫಲಾನುಭವಿಗಳಿಗೆ ಮಾತ್ರ ಹಣ ತಲುಪುವಂತೆ ಮಾಡಲು ಬಯೋಮೆಟ್ರಿಕ್ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ. ಈ ಕುರಿತು ಈಗಾಗಲೇ ಇಲಾಖೆಯ ಅಧಿಕಾರಿಗಳಿಗೆ ತಯಾರಿ ನಡೆಸುವಂತೆ ಸಿಎಂ ಸೂಚನೆ ನೀಡಿದ್ದಾರೆ. ಹೊಸದಾಗಿ ಅರ್ಜಿ ಸಲ್ಲಿಸುವ ಮಹಿಳೆಯರು ತಮ್ಮ ಬಯೋಮೆಟ್ರಿಕ್ ವಿವರಗಳನ್ನು ನೀಡುವುದು ಇನ್ನು ಮುಂದೆ ಕಡ್ಡಾಯವಾಗಲಿದೆ.

35
ಜನರಿಗೆ ಮಹತ್ವದ ಸೂಚನೆ - ಆತುರ ಬೇಡ:

ಸರ್ಕಾರ ಈ ಸೂಚನೆ ನೀಡಿದ್ದರೂ, ಸಾರ್ವಜನಿಕರು ಈಗಲೇ ನಾಡಕಚೇರಿ, ಬೆಂಗಳೂರು ಒನ್ ಅಥವಾ ಅಟಲ್‌ಜೀ ಜನಸ್ನೇಹಿ ಕೇಂದ್ರಗಳಿಗೆ ಓಡುವ ಅಗತ್ಯವಿಲ್ಲ. ಯಾಕೆಂದರೆ, ಹೊಸ ಅರ್ಜಿ ಸಲ್ಲಿಕೆಗೆ ಬೇಕಾದ ಆನ್‌ಲೈನ್ ಸಾಫ್ಟ್‌ವೇರ್ ಸಿದ್ಧವಾಗಿದೆಯಾದರೂ, ಬಯೋಮೆಟ್ರಿಕ್ ಬೆರಳಚ್ಚನ್ನು ಸಂಗ್ರಹಿಸುವ ಮತ್ತು ಅದನ್ನು ಮಾನ್ಯ ಮಾಡುವ (Validation) ತಾಂತ್ರಿಕ ಸಾಫ್ಟ್‌ವೇರ್ ಇನ್ನೂ ಪೂರ್ಣಪ್ರಮಾಣದಲ್ಲಿ ಸಿದ್ಧಗೊಂಡಿಲ್ಲ.

45
ಅರ್ಜಿ ಸಲ್ಲಿಕೆ ಯಾವಾಗ ಆರಂಭ?:

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಈಗಾಗಲೇ ಅರ್ಜಿಗಳ ಮಾದರಿಯನ್ನು ಸಿದ್ಧಪಡಿಸಿಕೊಂಡಿದೆ. ಬಯೋಮೆಟ್ರಿಕ್ ತಾಂತ್ರಿಕ ಸಿದ್ಧತೆಗಳು ಪೂರ್ಣಗೊಂಡ ಬಳಿಕ ಮತ್ತು ರಾಜ್ಯ ಸಚಿವ ಸಂಪುಟದ ಮುಂದಿನ ಬೆಳವಣಿಗೆಗಳ ನಂತರ ಅಧಿಕೃತವಾಗಿ ಹೊಸ ಅರ್ಜಿ ಸಲ್ಲಿಕೆಗೆ ಆಹ್ವಾನ ನೀಡಲಾಗುತ್ತದೆ. ಅಲ್ಲಿಯವರೆಗೆ ಸಾರ್ವಜನಿಕರು ಯಾವುದೇ ಗೊಂದಲಕ್ಕೆ ಒಳಗಾಗದೆ ಅಧಿಕೃತ ಪ್ರಕಟಣೆಗಾಗಿ ಕಾಯುವುದು ಒಳಿತು.

55
ತಾಂತ್ರಿಕ ಭದ್ರತೆಯೊಂದಿಗೆ ಸಿದ್ಧತೆ

ಒಟ್ಟಿನಲ್ಲಿ, ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯಲು ಬಾಕಿ ಇರುವ ಮಹಿಳೆಯರಿಗೆ ಶೀಘ್ರದಲ್ಲೇ ಅವಕಾಶ ಸಿಗಲಿದ್ದು, ಈ ಬಾರಿ ತಾಂತ್ರಿಕವಾಗಿ ಹೆಚ್ಚಿನ ಭದ್ರತೆಯೊಂದಿಗೆ ಅರ್ಜಿ ಸ್ವೀಕರಿಸಲು ಸರ್ಕಾರ ಸಜ್ಜಾಗುತ್ತಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories