ಹಾಸನ ವೈದ್ಯಕೀಯ ಮಹಾವಿದ್ಯಾಲಯ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಹಾಸನಾಂಬ ಉತ್ಸವ ವೆಬ್ಸೈಟ್ಗೆ ಚಾಲನೆ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಸಂಘ ಸಂಸ್ಥೆ ಪ್ರತಿನಿಧಿಗಳಿಗೆ ತರಬೇತಿ ಕಾರ್ಯಗಾರ ಉದ್ದೇಶಿಸಿ ಅವರು ಮಾತನಾಡಿದರು. ಪ್ರತಿ ವರ್ಷ ನಡೆಯುವ ಅಧಿದೇವತೆ ಹಾಸನಾಂಬೆ ಮತ್ತು ಸಿದ್ದೇಶ್ವರ ಜಾತ್ರಾ ಮಹೋತ್ಸವದಂದು ಯಾವುದೇ ಗೊಂದಲ ಆಗದಂತೆ ಸುಗಮ ದೇವಿ ದರ್ಶನಕ್ಕಾಗಿ ವಿವಿಧ ಇಲಾಖೆಯ ಅಧಿಕಾರಿಗಳು, ಸಂಘ ಸಂಸ್ಥೆಗಳಿಗೆ ಆಯಾ ಜವಾಬ್ದಾರಿ ವಹಿಸಲಾಗಿದೆ.
ಹಿಂದಿನ ವರ್ಷದ ವಿಡಿಯೋ ತುಣುಕು ವೀಕ್ಷಣೆ ಮಾಡಿ, ಆಗಿ ಸಣ್ಣ ಪುಟ್ಟ ಲೋಪದೋಷ ಸರಿಪಡಿಸಿಕೊಳ್ಳಲಾಗಿದೆ. ಈ ಬಾರಿಯೂ ಕೂಡ ಮುಖ್ಯಮಂತ್ರಿ ಅವರನ್ನು ಆಹ್ವಾನಿಸಲಾಗಿದ್ದು, ಅ.೨೮ ರಂದು ಬರುವುದಾಗಿ ಹೇಳಿದ್ದಾರೆ ಎಂದರು.
ಇದಕ್ಕಾಗಿ ಎಲ್ಲಾ ಸಿದ್ಧತೆ ಮಾಡಲಾಗುತ್ತಿದೆ. ಉಪಮುಖ್ಯಮಂತ್ರಿ ಅವರು ಅ.೨೬ ರಿಂದ ೨೯ರೊಳಗೆ ಬರುವುದಾಗಿ ಹೇಳಿದ್ದಾರೆ ಎಂದರು. ಈ ವರ್ಷ ೯ ದಿನ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ೨೦ ಲಕ್ಷಕ್ಕೂ ಅಧಿಕ ಭಕ್ತಾಧಿಗಳು ಬರುವ ನಿರೀಕ್ಷೆ ಇದೆ.
ಹಿಂದಿನ ಬಾರಿ ಆಗಿದ್ದ ಸಣ್ಣಪುಟ್ಟ ಲೋಪದೋಷ ಈ ಬಾರಿ ಆಗದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಸೆಸ್ಕಾಂ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಪೊಲೀಸ್ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳು ಮಾಡಬೇಕಾದ ತಮ್ಮ ತಮ್ಮ ಜವಾಬ್ದಾರಿಗಳ ಬಗ್ಗೆ ಈಗಾಗಲೇ ಪೂರ್ವಭಾವಿ ಸಭೆ ನಡೆಸಿ ಸೂಚಿಸಲಾಗಿದೆ ಎಂದರು.