ಹೈ ಆದೇಶ ಪ್ರಶ್ನಿಸಿದ್ದ ಎಚ್‌ಡಿಕೆಗೆ ಬೇರೆ ಪೀಠದಲ್ಲಿ ವಾದಿಸಿ ಎಂದ ಸುಪ್ರೀಂ

Published : May 20, 2025, 01:04 PM IST

ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ವಿರುದ್ಧದ ಅರಣ್ಯ ಭೂಮಿ ಒತ್ತುವರಿ ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ನಡೆಯಿತು. ಕರ್ನಾಟಕ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಎಚ್‌ಡಿಕೆ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ನ್ಯಾ. ಪಂಕಜ್ ಮಿಥಲ್ ನೇತೃತ್ವದ ಪೀಠ ಮುಂದೆ ವಾದ ಮಂಡಿಸಲು ಸೂಚಿಸಲಾಗಿದೆ.

PREV
13
ಹೈ ಆದೇಶ ಪ್ರಶ್ನಿಸಿದ್ದ ಎಚ್‌ಡಿಕೆಗೆ ಬೇರೆ ಪೀಠದಲ್ಲಿ ವಾದಿಸಿ ಎಂದ ಸುಪ್ರೀಂ

ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ವಿರುದ್ಧದ ಅರಣ್ಯ ಭೂಮಿ ಒತ್ತುವರಿ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿದ್ದ ಅರ್ಜಿ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯಿತು. 

23

ಅರ್ಜಿಯು ನ್ಯಾ.ಸುಂದರೇಶ್ ಅವರ ನೇತೃತ್ವದ ಪೀಠದಲ್ಲಿ ವಿಚಾರಣೆ ಬಂದಿತ್ತು. ಈ ವೇಳೆ, ನ್ಯಾ.ಪಂಕಜ್ ಮಿಥಲ್ ನೇತೃತ್ವದ ಪೀಠ ಮುಂದೆ ವಾದ ಮಂಡಿಸಲು ಸುಂದರೇಶ್ ಅವರ ನೇತೃತ್ವದ ಪೀಠವು ಸೂಚನೆ ನೀಡಿತು. ಈ ಹಿಂದೆ ಪಂಕಜ್ ಮಿಥಲ್, ನ್ಯಾ.ಎಸ್ ವಿ ಎನ್ ಭಟ್ಟಿ ಪೀಠದಲ್ಲಿ ವಿಚಾರಣೆ ನಡೆದಿತ್ತು.

33

ರಾಮನಗರ ಜಿಲ್ಲೆಯ ಕೇತಮಾರನಹಳ್ಳಿಯ ಅರಣ್ಯ ಭೂಮಿ ಒತ್ತುವರಿ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಆರೋಪಿಯನ್ನಾಗಿಸಿ ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಎಚ್‌ಡಿಕೆ ಅವರು ಸುಪ್ರೀಂ ಕೋರ್ಟ್‌ನ ಕದ ತಟ್ಟಿದ್ದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories