ಕ್ರಸ್ಟ್ ಗೇಟ್ ಆಪರೇಟರ್ ಸಿಸ್ಟಮ್ ಪಕ್ಕದಲ್ಲಿಯೇ ಶೂಟ್ ಮಾಡಲಾಗಿದೆ. ಅಣೆಕಟ್ಟೆಯ ಮೇಲ್ಭಾಗದಲ್ಲಿಯೇ ಶೂಟ್ ಮಾಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಅಂತಾರಾಷ್ಟ್ರೀಯ ಉಗ್ರಗಾಮಿಗಳ ಕಣ್ಣು ಜಲಾಶಯಗಳ ಮೇಲೆ ಇರುವುದರಿಂದ ತುಂಗಭದ್ರಾ ಜಲಾಶಯ, ಅಣೆಕಟ್ಟೆ ಮೇಲೆಯೂ ಪ್ರವೇಶಕ್ಕೆ ನಿರ್ಬಂಧವಿದೆ. ಪತ್ರಕರ್ತರು ಸೇರಿದಂತೆ ಯಾರಿಗೂ ಹೋಗಲು ಆವಕಾಶವಿಲ್ಲ. ವಿಶೇಷ ಸಂದರ್ಭದಲ್ಲಿ ಮಾತ್ರ ಸಚಿವರು, ಅಧಿಕಾರಿಗಳಿಗೆ ಪ್ರವೇಶ ನೀಡಲಾಗುತ್ತದೆ. ಬಾಗಿನ ಅರ್ಪಿಸುವ ವೇಳೆಯಲ್ಲಿ ಕಟ್ಟೆಚ್ಚರದ ನಡುವೆ ಅವಕಾಶ ನೀಡಲಾಗುತ್ತಿದೆ. ಆದರೆ, ಇಲ್ಲಿ ಪ್ರೀ ವೆಡ್ಡಿಂಗ್ ಶೂಟ್ ಮಾಡಲಾಗಿದೆ. ಬುಧವಾರ ಬೆಳ್ಳಂಬೆಳಗ್ಗೆ ಪ್ರೀ ವೆಡ್ಡಿಂಗ್ ಶೂಟ್ ನಡೆದಿದ್ದು, ಬಗೆ-ಬಗೆಯ ಭಂಗಿಯಲ್ಲಿ ಅಣೆಕಟ್ಟೆಯ ಮೇಲೆ ವಾಹನಗಳೊಂದಿಗೆ ಫೋಟೋ ಶೂಟ್ ಮತ್ತು ವೀಡಿಯೋ ಶೂಟ್ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ.