ಈ ಕುರಿತು ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಬಿಪಿಎಲ್ ಕಾರ್ಡ್ಗಳನ್ನು ಹೊಂದಿರುವುದು ಕರ್ನಾಟಕವಾಗಿದ್ದು, ರಾಜ್ಯದ ಒಟ್ಟು ಕಾರ್ಡ್ಗಳ ಪೈಕಿ 70ರಿಂದ 75 ಶೇಕಡಾ ಕಾರ್ಡ್ಗಳು ಬಿಪಿಎಲ್ ವರ್ಗದಲ್ಲಿವೆ. ಈ ಹಿನ್ನೆಲೆಯಲ್ಲಿ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಪರಿಷ್ಕರಣೆ ಪ್ರಕ್ರಿಯೆ ಆರಂಭಿಸುವುದು ಅನಿವಾರ್ಯವಾಗಿದೆ.
ಆದ್ದರಿಂದ ಅನರ್ಹ ಬಿಪಿಎಲ್ ಕಾರ್ಡ್ದಾರರನ್ನು ಎಪಿಎಲ್ಗೆ ವರ್ಗಾಯಿಸಲಾಗುವುದು, ನಿಜವಾದ ಬಡವರಿಗೆ ಮಾತ್ರ ಸಬ್ಸಿಡಿ ಸೌಲಭ್ಯ ನೀಡಲಾಗುತ್ತದೆ. ಆದರೆ, ಯಾವುದೇ ಬಿಪಿಎಲ್ (ಬಡತನ ರೇಖೆಗಿಂತ ಕೆಳಗಿನವರು) ರೇಷನ್ ಕಾರ್ಡ್ಗಳನ್ನು ರದ್ದು ಮಾಡುವ ಪ್ರಶ್ನೆಯೇ ಇಲ್ಲ ಸ್ಪಷ್ಟನೆ ನೀಡಿದ್ದಾರೆ.