ನೆಲಮಟ್ಟದಲ್ಲಿ ಬೆಳೆದ ಕಬ್ಬು , ಬಾಳೆ ಗಿಡ, ಟೊಮ್ಯಾಟೊ ಮತ್ತಿತರ ತರಕಾರಿ ಬೆಳೆಗಳನ್ನು ಸುಲಭವಾಗಿ ತಿಂದು ಆನೆ ಹಸಿವು ನೀಗಿಸಿಕೊಳ್ಳುತ್ತಿತ್ತು. ಇದನ್ನೇ ನಿತ್ಯ ಅಭ್ಯಾಸ ಮಾಡಿಕೊಂಡಿದ್ದ ಗಂಡಾನೆಯನ್ನು ಅರಣ್ಯ ಇಲಾಖೆ ಸೆರೆ ಹಿಡಿದಿದೆ. ನಂತರ, ಕಾಡಾನೆಗೆ ಅಡ್ಡಾದಿಡ್ಡಿ ಬೆಳೆದಿದ್ದ ದಂತಗಳನ್ನು ಕತ್ತರಿಸಿ ಸುಲಭವಾಗಿ ಸೊಂಡಿಲು ಹೊರಚಾಚಾಲು ಅನುವು ಮಾಡಿಕೊಡಲಾಗಿದೆ. ಈ ಮೂಲಕ ಆನೆಯು ಸೊಂಡಿಲಿನ್ನು ಮೇಲೆತ್ತಿ ಸೊಪ್ಪುಗಳನ್ನು ಕಿತ್ತು ತಿನ್ನುವುದಕ್ಕೆ ಅಭ್ಯಾಸವನ್ನು ಮಾಡಿಸಲಾಗಿದೆ.